ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು
ಚಿಕ್ಕಮಗಳೂರು: ಇಲ್ಲಿಯ ಚುರ್ಚೆ ಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಕಾಡ್ಗಿಚ್ಚಿನಿಂದ ಹಲವಾರು ಗಿಡ, ಮರಗಳು ಸುಟ್ಟು ಕರಕಲಾಗಿವೆ. ಅಲ್ಲದೇ ಘಟನೆಯಲ್ಲಿ ಪ್ರಾಣಿ, ಪಕ್ಷಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ.
Last Updated : Feb 14, 2023, 11:34 AM IST