ತುಮಕೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.. ಜೆಪಿ ನಡ್ಡಾ ರೋಡ್​ ಶೋ

By

Published : Mar 18, 2023, 2:28 PM IST

thumbnail

ತುಮಕೂರು: ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆ ತುಮಕೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಗರದಲ್ಲಿ ರೋಡ್​ ಶೋ ನಡೆಸಿದ್ದಾರೆ. ರೋಡ್ ಶೋನಲ್ಲಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಅಲ್ಲದೇ ರೋಡ್​ ಶೋ ಉದ್ದಕ್ಕೂ ಪಕ್ಷದ ಬಾವುಟ ಹಿಡಿದು ಕಾರ್ಯಕರ್ತರು ಘೋಷಣೆಗಳನ್ನು ಹಾಕುತ್ತ ಸಾಗಿದ್ದಾರೆ. ರೋಡ್​ ಶೋ ನಲ್ಲಿ ಜೆ ಪಿ ನಡ್ಡಾರೊಂದಿಗೆ, ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ, ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಸೇರಿದಂತೆ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. 

ಇನ್ನು ಇಂದು ತುಮಕೂರಿ ಜಿಲ್ಲೆಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ನಡ್ಡಾ ಚಾಲನೆ ನೀಡಿದ್ದಾರೆ. ವಿಜಯ ಸಂಕಲ್ಪ ಯಾತ್ರೆ ಮುಖಾಂತರ ಡಬಲ್​ ಎಂಜಿನ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವ ಕಾರ್ಯವನ್ನು ಪಕ್ಷದ ನಾಯಕರು ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಜೆ ಪಿ ನಡ್ಡಾ ಚಿತ್ರದುರ್ಗದ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅದಾದ ಬಳಿಕ ತುಮಕೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಬಂದ್: ಬಸನಗೌಡ ಪಾಟೀಲ್ ಯತ್ನಾಳ್         

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.