ಖರ್ಗೆ, ರಾಹುಲ್ ಬಳಿಕ ಸುರ್ಜೇವಾಲ ನಿವಾಸದಲ್ಲಿ ಡಿಕೆಶಿ ಸಭೆ: ವಿಡಿಯೋ

By

Published : May 17, 2023, 7:55 PM IST

thumbnail

ನವದೆಹಲಿ: ಕರ್ನಾಟಕದ ಮುಂದಿನ ಸಿಎಂ ಆಯ್ಕೆ ಕಗ್ಗಂಟು ಇಂದು ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಬೆಳಗ್ಗೆಯಿಂದ ಹೈಕಮಾಂಡ್​ ಮಟ್ಟದಲ್ಲಿ ಸಭೆಗಳು ನಡೆಯುತ್ತಿದ್ದರೂ ಯಾವುದೇ ಪ್ರತಿಫಲ ಸಿಕ್ಕಿಲ್ಲ. ಇದೀಗ ಡಿಕೆ ಶಿವಕುಮಾರ್​ ಅವರು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​​ ಸುರ್ಜೇವಾಲ ಅವರ ನಿವಾಸಕ್ಕೆ ತೆರಳಿದ್ದು, ಮಾತುಕತೆ ನಡೆಸುತ್ತಿದ್ದಾರೆ.

ಇದೇ ವೇಳೆ ಮಾಧ್ಯಮಗಳಿಗೆ ಹೇಳಿಕೆ ನೀಡಲು ನಿರಾಕರಿಸಿದ ಡಿಕೆ ಶಿವಕುಮಾರ್​​, ಯಾರದ್ದೋ ಮಾತು ಕೇಳಿಕೊಂಡು ಸುಳ್ಳು ಸುದ್ದಿಗಳನ್ನು ಭಿತ್ತರಿಸುತ್ತಿದ್ದೀರಿ. ನಿಮಗೆ ಏನು ಬೇಕೋ ಅದನ್ನು ಮಾಡಿ ಎಂದು ತುಸು ಬೇಜಾರಿನಿಂದಲೇ ಅವರು ಹೇಳಿದರು. ಇಷ್ಟಾದರೂ ಮಾಧ್ಯಮಗಳ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರ ನೀಡದೇ ಸಸ್ಪೆನ್ಸ್​ ಮುಂದುವರಿಸಿದ್ದಾರೆ.

ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಅವರ ಬೆಂಬಲಿಗರು ಕೂಡ ಲಾಬಿ ನಡೆಸುತ್ತಿದ್ದಾರೆ. ಎಂ ಬಿ ಪಾಟೀಲ್​ ಅವರು ಕೂಡ ದೆಹಲಿಗೆ ಆಗಮಿಸಿದ್ದು, ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವಂತೆ ನಾಯಕರ ಮೇಲೆ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ.

ಇನ್ನು, ಮಂಗಳವಾರ ಇಡೀ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನಿವಾಸದಲ್ಲಿ ಸಿಎಂ ಪ್ರಬಲ ಆಕಾಂಕ್ಷಿಗಳ ಮಧ್ಯೆ ಸಭೆ ನಡೆಸಲಾಗಿತ್ತು. ಇಂದು ಬೆಳಗ್ಗೆ ರಾಹುಲ್​ ಗಾಂಧಿ ಅವರು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದರೂ ಆಯ್ಕೆ ಬಿಕ್ಕಟ್ಟು ಬಗೆಹರಿದಿಲ್ಲ.

ಇದನ್ನೂ ಓದಿ: ಇನ್ನೂ ಬಿಚ್ಚಿಕೊಳ್ಳದ ಕಾಂಗ್ರೆಸ್ ಸಿಎಂ ಆಯ್ಕೆ ಕಗ್ಗಂಟು: ದೆಹಲಿಯಲ್ಲಿ ಮುಂದುವರಿದ ಕಸರತ್ತು

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.