ಕೇಂದ್ರ ಸಚಿವೆ ಭಾರತಿ ಪವಾರ್​ ತಾಯಿಯ ಚಿನ್ನದ ಸರ ಎಗರಿಸಿ ಕಳ್ಳರು ಪರಾರಿ

By

Published : Aug 20, 2023, 3:31 PM IST

thumbnail

ನಾಸಿಕ್ (ಮಹಾರಾಷ್ಟ್ರ): ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಅವರ ತಾಯಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಎಳೆದೊಯ್ದಿರುವ ಘಟನೆ ಮಹಾರಾಷ್ಟ್ರದ ನಾಸಿಕ್​ನಲ್ಲಿ ನಡೆದಿದೆ. 

ಭಾರತಿ ಪವಾರ್ ಅವರ ತಾಯಿ ಶಾಂತಾಬಾಯಿ ಬಾಗುಲ್ ಅವರು ಶನಿವಾರ ಸಂಜೆ 6ರಿಂದ 7ಗಂಟೆ ಸುಮಾರಿಗೆ ತರಕಾರಿ ಖರೀದಿಸಲು ಮಾರುಕಟ್ಟೆಗೆ ಹೋಗಿದ್ದರು. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಗೆ ಕೈ ಹಾಕಿ ಕೊರಳಲ್ಲಿದ್ದ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ. ಈ ವೇಳೆ ತಾಯಿ ಶಾಂತಾಬಾಯಿ ಬಾಗುಲ್ ಗಾಬರಿಗೊಂಡಿದ್ದು, ಸುತ್ತ ಮುತ್ತ ಜನರು ಇಲ್ಲದೇ ಇದ್ದುದರಿಂದ ಸಹಾಯಕ್ಕಾಗಿ ಕೂಗಲು ಅವರಿಗೆ ಸಾಧ್ಯವಾಗಿಲ್ಲ. ಈ ಘಟನೆಯಿಂದ ತುಂಬಾ ಭಯಭೀತಗೊಂಡಿರುವುದಾಗಿ ಶಾಂತಾಬಾಯಿ ಹೇಳಿದ್ದಾರೆ. 

ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕಳ್ಳತನ, ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗಿದ್ದು, ಸರಗಳ್ಳತನವಂತೂ ಸಾಮಾನ್ಯವಾಗಿ ಬಿಟ್ಟಿದೆ. ನಾಸಿಕ್​ ನಗರದಲ್ಲಿ ದುಷ್ಕೃತ್ಯಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ನಗರದ ಎಲ್ಲಾ ಕಡೆ ಪೊಲೀಸ್ ಗಸ್ತು ಹೆಚ್ಚಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಅಖಿಲೇಶ್​ ಯಾದವ್ ಅಪ್ಪಿಕೊಂಡ ರಜನಿಕಾಂತ್‌: ಭೇಟಿ ಬಗ್ಗೆ 'ತಲೈವಾ' ಹೇಳಿದ್ದೇನು?

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.