ಶಿಮ್ಲಾದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ- ವಿಡಿಯೋ

By

Published : May 13, 2023, 10:49 AM IST

thumbnail

ಶಿಮ್ಲಾ(ಹಿಮಾಚಲ ಪ್ರದೇಶ): ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಮ್ಲಾದ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಿಯಾಂಕಾ ಅವರು ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನದಲ್ಲಿ 'ದೇಶ ಮತ್ತು ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದಾರೆ' ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ನಾನು ಅಜೇಯ. ತುಂಬಾ ಆತ್ಮವಿಶ್ವಾಸ ಹೊಂದಿದ್ದೇನೆ ಎಂದು ಕಾಂಗ್ರೆಸ್ ಆತ್ಮವಿಶ್ವಾಸದಿಂದ ಟ್ವೀಟ್ ಮಾಡಿದೆ.

ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮೊದಲ ಹಂತದಲ್ಲಿ ಕಾಂಗ್ರೆಸ್​ 117 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 69 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡು ಎರಡನೇ ಸ್ಥಾನದಲ್ಲಿದೆ. ಪ್ರಾಂತ್ಯವಾರು ಫಲಿತಾಂಶದಲ್ಲೂ ಕಾಂಗ್ರೆಸ್​ ಪಕ್ಷ ಮುಂದಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನ ಸಭೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು. 2018ರ ಚುನಾವಣೆಯಲ್ಲಿ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಅಚ್ಚರಿಯ ರೀತಿಯಲ್ಲಿ ಜೆಡಿಎಸ್ ಜತೆ ಸೇರಿ ಸಮಿಶ್ರ ಸರ್ಕಾರ ರಚಿಸಿತ್ತು.

ಇದನ್ನೂ ಓದಿ: ಕರ್ನಾಟಕ ಚುನಾವಣೆ ಫಲಿತಾಂಶ: ಒಂದೇ ಕ್ಲಿಕ್​ನಲ್ಲಿ ನಿಮ್ಮ ಕ್ಷೇತ್ರದ ಮಾಹಿತಿ ತಿಳಿಯಿರಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.