ರಾಹುಲ್ ಗಾಂಧಿ ದೇಶದ ಯುವಕರ‌ ಕ್ಷಮೆಯಾಚಿಸಬೇಕು: ಸಂಸದ ತೇಜಸ್ವಿ ಸೂರ್ಯ

By

Published : Mar 20, 2023, 2:47 PM IST

thumbnail

ಬೆಳಗಾವಿ: ಇಂದು ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಕರ್ನಾಟಕ ಅನುಭವ ಮಂಟಪದ ನಾಡು. ಈ ನಾಡಿಗೆ ಅವರು ಕಾಲಿಡುವ ಮುಂಚೆ, ಈ ನಾಡಿನ ಜನತೆ ಹಾಗೂ ಯುವಕರ ಕ್ಷಮೆ ಕೇಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಇಂಗ್ಲೆಂಡ್ ಹಾಗೂ ಬ್ರಿಟನ್‌ನಲ್ಲಿ ಭಾರತದ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ‌‌ ಎಂದು‌ ಹೇಳುತ್ತಾರೆ. ಇದು ಅಕ್ಷಮ್ಯ ಅಪರಾಧ. ಇದು ಬೇಜವಾಬ್ದಾರಿ ಹೇಳಿಕೆ. ಈ ದೇಶದ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಕಳಕಳಿ ಹಾಗೂ ಕಾಳಜಿ ಇದೆಯಾ? ಅವರು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಸಂಸದ ತೇಜಸ್ವಿ ಸೂರ್ಯ, ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇವುಗಳನ್ನೂ ಓದಿ: 

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.