ಮೈಸೂರು: ಹುಲ್ಲಿನ ಬವಣೆಗೆ ಕಿಡಿಗೇಡಿಗಳಿಂದ ಬೆಂಕಿ
ಮೈಸೂರು: ಹುಲ್ಲಿನ ಬವಣೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲಿ ನಡೆದಿದೆ. ಗುರುಸ್ವಾಮಿ ಎಂಬುವವರಿಗೆ ಸೇರಿದ 20 ಸಾವಿರ ರೂ.ಗೂ ಹೆಚ್ಚು ಮೌಲ್ಯದ ಭತ್ತದ ಹುಲ್ಲು ಸುಟ್ಟು ಕರಕಲಾಗಿದೆ ಎಂದು ಹೇಳಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.