17 ದಿನಗಳ ಬಳಿಕ ಕಾರ್ಮಿಕರು ಸುರಂಗದಿಂದ ಒಬ್ಬೊಬ್ಬರಾಗಿ ಹೊರಬಂದ ದೃಶ್ಯ- ನೋಡಿ

By ETV Bharat Karnataka Team

Published : Nov 29, 2023, 9:32 AM IST

thumbnail

ಉತ್ತರಾಖಂಡ: ಉತ್ತರಕಾಶಿಯ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿದು ಸಂಕಷ್ಟದಲ್ಲಿ ಸಿಲುಕಿದ್ದ 41 ಕಾರ್ಮಿಕರು 17 ದಿನಗಳ ಬಳಿಕ ಮಂಗಳವಾರ ರಾತ್ರಿ ಸುರಕ್ಷಿತವಾಗಿ ಹೊರಬಂದರು. ಈ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದ ದುರಂತವೊಂದು ಸುಖಾಂತ್ಯ ಕಂಡಿತು. ರಕ್ಷಣಾ ಪೈಪ್‌ನಿಂದ ಹೊರಬಂದ ಬಳಿಕ ಕೆಲಸಗಾರರೊಬ್ಬರು ಖುಷಿಯಿಂದ ಥಮ್ಸ್ ಅಪ್ ಮಾಡಿದರು. ಕಾರ್ಮಿಕರು ಒಬ್ಬೊಬ್ಬರಾಗಿ ಪೈಪ್​ನಿಂದ ಹೊರಬರುವ ದೃಶ್ಯ ಇಲ್ಲಿದೆ.    

ಚಾರ್​​ಧಾಮ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12ರಂದು ಭೂಕುಸಿತ ಸಂಭವಿಸಿತ್ತು. ಪರಿಣಾಮ ಸುರಂಗದೊಳಗೆ ಕೆಲಸ ಮಾಡುತ್ತಿದ್ದ 41 ಕಾರ್ಮಿಕರು ಅಲ್ಲಿಯೇ ಸಿಕ್ಕಿಬಿದ್ದಿದ್ದರು. ಅಂದಿನಿಂದ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿತ್ತು. ಈ ಮಧ್ಯೆ ಅನೇಕ ಸಲ ಕೊರೆಯುವ ಯಂತ್ರಗಳು ಕೆಟ್ಟು ನಿಂತಿದ್ದವು. ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕರಿಗೆ ಸಣ್ಣ ಪೈಪ್‌ಗಳ ಮೂಲಕ ಆಮ್ಲಜನಕ, ವಿದ್ಯುತ್​ ಸಂಪರ್ಕ ಮತ್ತು ಆಹಾರ ಪೂರೈಸಲು ವ್ಯವಸ್ಥೆ ಮಾಡಲಾಗಿತ್ತು. ಈ ರಕ್ಷಣಾ ಕಾರ್ಯದಲ್ಲಿ ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್, ಬಿಆರ್​ಒ, ಎನ್​ಹೆಚ್​​ಐಡಿಸಿಎಲ್​ ಮತ್ತು ಐಟಿಬಿಪಿ ಸೇರಿದಂತೆ ಹಲವು ಏಜೆನ್ಸಿಗಳ ತಂಡಗಳು ಭಾಗಿಯಾಗಿದ್ದವು.

ಇದನ್ನೂ ಓದಿ: ಕತ್ತಲೆಯಿಂದ ಬೆಳಕಿನೆಡೆಗೆ : 41 ಕಾರ್ಮಿಕರ ಕುಟುಂಬ ನಿರಾಳ ; ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.