ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ - ಸಿಕ್ಕ ಸಿಕ್ಕ ವಸ್ತುಗಳು ಧ್ವಂಸ- ಗಜರಾಜನ ದಾಂಧಲೆ ನೋಡಿ

By

Published : Jun 26, 2023, 12:18 PM IST

thumbnail

ಚಾಮರಾಜನಗರ : ಒಂಟಿ ಸಲಗವೊಂದು ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ಸಂತರದೊಡ್ಡಿ ಗ್ರಾಮದಲ್ಲಿ ನಡೆದಿದೆ‌. ಆಹಾರ ಹುಡುಕುತ್ತ ದಿಢೀರನೇ ಗ್ರಾಮಕ್ಕೆ ಎಂಟ್ರಿಕೊಟ್ಟ ಗಜರಾಜನನ್ನು ಕಂಡ ಜನರು, ದಿಕ್ಕಾಪಾಲಾಗಿ ಓಡಿಹೋದರು. ಜೊತೆಗೆ, ಕಬ್ಬು, ಬಾಳೆ ಫಸಲನ್ನು ನಾಶಪಡಿಸಿದ್ದು, ಅನೇಕ ವಸ್ತುಗಳನ್ನು ಧ್ವಂಸ ಮಾಡಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಆನೆಯನ್ನು ಕಾಡಿಗೆ ಅಟ್ಟಿದ್ದಾರೆ‌‌. ರಾಷ್ಟ್ರೀಯ ಹೆದ್ದಾರಿಯಲ್ಲೂ ಆನೆ ಅವಾಂತರ, ಈಗ ಗ್ರಾಮದಲ್ಲೂ ಆನೆ ಹಾವಳಿ ಎಂದು ಅಸನೂರು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.  

ಇದನ್ನೂ ಓದಿ : ಚಾಮರಾಜನಗರ ಗಡಿಯಲ್ಲಿ ಮರಿ ಆನೆ ಅಟ್ಯಾಕ್...ಸವಾರ ಜಸ್ಟ್ ಮಿಸ್, ಬೈಕ್ ಪೀಸ್-ಪೀಸ್

ಇನ್ನು ಚಾಮರಾಜನಗರದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ ವಾಹನ ಸವಾರನ ಮೇಲೆ ದಾಳಿ ಮಾಡಿ ಬೈಕ್ ಜಖಂ ಮಾಡಿರುವ ಘಟನೆ ಜೂನ್​ 9 ರಂದು ನಡೆದಿತ್ತು. ತಮಿಳುನಾಡಿನಿಂದ ಕರ್ನಾಟಕಕ್ಕೆ ಆಗಮಿಸುತ್ತಿದ್ದ ಬೈಕ್ ಸವಾರನ ಮೇಲೆ ಮರಿ ಆನೆ ದಾಳಿ ಮಾಡಲು ಮುಂದಾಗುತ್ತಿದ್ದಂತೆ ಭಯಭೀತರಾದ ಬೈಕ್ ಸವಾರ, ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ. 

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.