ಬೆಳಗಾವಿ: ವೃದ್ಧನಿಗೆ ಡಿಕ್ಕಿಯಾಗಿ ಬಸ್ ಚಕ್ರದಡಿ ಸಿಲುಕಿದ ಬೈಕ್‌; ಮಹಿಳೆ ಸಾವು

By ETV Bharat Karnataka Team

Published : Nov 30, 2023, 2:20 PM IST

thumbnail

ಬೆಳಗಾವಿ: ವೃದ್ಧನಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಕೆಎಸ್ಆರ್​ಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.  

ಮೃತರನ್ನು ಧಾರವಾಡ ಮೂಲದ ವಿದ್ಯಾಶ್ರೀ (32) ಎಂದು ಗುರುತಿಸಲಾಗಿದೆ. ಬೈಕ್​ ಸವಾರ ಮತ್ತು ವಿದ್ಯಾಶ್ರೀ ಎಂಬವರು ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಬಸ್ ನಿಲ್ದಾಣ ಮುಂಭಾಗದಲ್ಲಿ ತಲೆ ಮೇಲೆ ದಿನಸಿ ಹೊತ್ತು ಸಾಗುತ್ತಿದ್ದ ವೃದ್ಧನಿಗೆ ಇವರು ಪ್ರಯಾಣಿಸುತ್ತಿದ್ದ ಬೈಕ್​ ಡಿಕ್ಕಿ ಹೊಡೆದು ರಸ್ತೆ ಮೇಲೆ ಉರುಳಿದೆ. ಹಿಂಬದಿ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಇವರ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್​ ಸವಾರನಿಗೆ ಗಂಭೀರ ಗಾಯಗಳಾಗಿವೆ. ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಎರಡು ದಿನಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.  

ಅಪಘಾತದ ಭೀಕರತೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಇನ್ನೋವಾ ಕಾರಿನಲ್ಲಿ ₹8 ಕೋಟಿ ಪತ್ತೆ; ದಾಖಲೆ ಇಲ್ಲದ ಹಣ ಪೊಲೀಸ್ ವಶಕ್ಕೆ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.