ತುಮಕೂರು: ಹಾಡಹಗಲೇ ಯುವಕನೊಬ್ಬನ ಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ- ವಿಡಿಯೋ

By

Published : Aug 4, 2023, 1:40 PM IST

thumbnail

ತುಮಕೂರು: ಹಾಡಹಗಲೇ ಕುಣಿಗಲ್ ಪಟ್ಟಣದಲ್ಲಿ ಸಿನೆಮಾ ರೀತಿಯಲ್ಲಿ ಮಚ್ಚು, ಲಾಂಗ್​ಗಳಿಂದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಬೈಕ್​ನಲ್ಲಿ ಬಂದಂತಹ ನಾಲ್ವರು ಯುವಕರು ಹಾಡಹಗಲೇ ಲಾಂಗ್​ಗಳನ್ನು ಹಿಡಿದು ಕುಣಿಗಲ್ ಪಟ್ಟಣದ ಎಲ್ ಐ ಸಿ ಕಚೇರಿ ಮುಂಭಾಗದಲ್ಲಿ ಹಲ್ಲೆ ಮಾಡಿದ್ದಾರೆ.

ಇನ್ನು ಈ ದೃಶ್ಯವನ್ನು ಕಂಡ ಪ್ರತ್ಯಕ್ಷ ದೃಶ್ಯಗಳು ಕ್ಷಣಕಾಲ ದಂಗಾಗಿ ಹೋಗಿದ್ದಾರೆ. ಮೇಸ್ತ್ರಿ ಗೌಡನ ಪಾಳ್ಯದ ಜಗದೀಶ್ ಅಲಿಯಾಸ್ ಜಗ್ಗ ಎಂಬುವವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಕೂತರಹಳ್ಳಿ ಗ್ರಾಮದ ಆಕಾಶ್, ಚಿಕ್ಕಣ್ಣ, ಶ್ರೀನಿವಾಸ್​ ಆರೋಪಿಗಳು. ಇನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಗದೀಶ್​ನನ್ನು ಸ್ಥಳೀಯರು ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಹಲ್ಲೆಗೊಳಗಾದ ಜಗದೀಶ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸಂಬಂಧಪಟ್ಟ ಕುಣಿಗಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಬ್​ ಇನ್​ಸ್ಪೆಕ್ಟರ್​​ನನ್ನು ಗುಂಡಿಕ್ಕಿ ಕೊಲೆ ಮಾಡಿದ ಅಪರಿಚಿತ ದುಷ್ಕರ್ಮಿಗಳು!

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.