ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

By

Published : Sep 9, 2020, 12:58 PM IST

thumbnail

ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಸಮೀಪ‌ ಎರಡು ದಿನಗಳ ಹಿಂದೆ ನಡೆದಿದ್ದ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಅಪಘಾತದಲ್ಲಿ ಬೈಕ್​ ಸವಾರ ಮುಕ್ತಿಯಾರ್ ನವಲೂರು ಎಂಬಾತ ಸಾವನ್ನಪ್ಪಿದ್ದಾರೆ. ಈತ ಸೋನಾಪೂರದ ನಿವಾಸಿ ಎಂದು ತಿಳಿದುಬಂದಿದೆ. ಬೆಳಗಾವಿಯಿಂದ ವೇಗವಾಗಿ ಬರುತ್ತಿದ್ದ ವೋಲ್ವೋ ಬಸ್, ಯೂ ಟರ್ನ್ ಮಾಡುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಮುಕ್ತಿಯಾರ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.