ಮಂತ್ರಾಲಯದಲ್ಲಿ ಗಣೇಶ ಚತುರ್ಥಿ ಆಚರಣೆ: ಸುಭುದೇಂದ್ರ ತೀರ್ಥರಿಂದ ವಿಶೇಷ ಪೂಜೆ
ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಯನ್ನ ಪ್ರತಿಷ್ಠಾಪಿಸಲಾಗಿದ್ದು, ಮಠದ ಪೀಠಾಧಿಪತಿಯಾಗಿರುವ ಸುಭುದೇಂದ್ರ ತೀರ್ಥರು ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕೊರೊನಾ ಸೋಂಕಿನ ಹಿನ್ನೆಲೆ, ಶ್ರೀ ಮಠದ ಸಿಬ್ಬಂದಿ, ಅಧಿಕಾರಿಗಳು ಮಾತ್ರ ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.