ಬಾಗಲಕೋಟೆಯಲ್ಲಿ ಮತ್ತೆ ಮುನಿದ ವರುಣ... ಜನ ಹೈರಾಣ
ಉತ್ತರ ಕರ್ನಾಟಕದಲ್ಲಿ ವರುಣನ ರೌದ್ರಾವತಾರ ತಣ್ಣಗಾಗುವ ಲಕ್ಷಣಗಳು ಕಾಣ್ತಿಲ್ಲ. ಕೃಷ್ಣೆಯ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ. ಇತ್ತ ಬೀದಿಗೆ ಬಿದ್ದಿರುವ ನೆರೆ ಸಂತ್ರಸ್ತರಿಗೆ ಈವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂಬ ಆರೋಪಗಳಿವೆ. ಸ್ಥಳಾಂತರದ ಭಾಗ್ಯವೂ ಸಿಕ್ಕಿಲ್ಲ. ಹೀಗಾಗಿ ದಿಕ್ಕು ತೋಚದಂತಾಗಿರುವ ಜನರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ.