ವಸತಿ ಶಾಲೆಯ ಪ್ರಾಂಶುಪಾಲ, 31 ಮಕ್ಕಳಿಗೆ ಕೊರೊನಾ ದೃಢ: ಚನ್ನಗಿರಿಯಲ್ಲಿ ಆತಂಕ

By

Published : Jan 11, 2022, 4:05 PM IST

thumbnail

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು 31 ವಿದ್ಯಾರ್ಥಿಗಳಿಗೆ ಕೋವಿಡ್​ ಸೋಂಕು ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ವಸತಿ ಶಾಲೆಯಲ್ಲಿ 250ಕ್ಕೂ ಹೆಚ್ಚು ಮಕ್ಕಳಿದ್ದು, ನಿನ್ನೆ ಸಮೀಪದ ಪಾಂಡೋಮಟ್ಟಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ 110 ಮಕ್ಕಳಲ್ಲಿ 31 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ. ಈಗ ಇಂದಿರಾಗಾಂಧಿ ವಸತಿ ಶಾಲೆಯನ್ನು ಕಂಟೈನ್​ಮೆಂಟ್​ ವಲಯವನ್ನಾಗಿ ಮಾಡಲಾಗಿದೆ. ಈ ಕುರಿತು 'ಈಟಿವಿ ಭಾರತ' ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.