ಕೋರ್ಟ್ ತೀರ್ಪಿನ ನಂತರ ಅನರ್ಹರು ಯಾವ ಪಕ್ಷಕ್ಕೆ ಹೋಗಲಿದ್ದಾರೆ ಎಂಬುದು ತೀರ್ಮಾನವಾಗಲಿದೆ: ಡಿಸಿಎಂ ಸವದಿ
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಮಾತನಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ನ್ಯಾಯಾಲಯದಲ್ಲಿ ತೀರ್ಮಾನವಾದ ನಂತರ ಅನರ್ಹ ಶಾಸಕರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ತೀರ್ಮಾನವಾಗಬೇಕು. ಅವರುಗಳು ಬಿಜೆಪಿಗೆ ಬರುವ ನಿರ್ಧಾರ ತೆಗೆದುಕೊಂಡರೆ, ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ಈ ಕುರಿತು ತೀರ್ಮಾನಿಸುತ್ತೆ ಎಂದು ತಿಳಿಸಿದರು.