ಧಾರವಾಡದಲ್ಲಿ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್ : 9 ಎಕರೆಯಲ್ಲಿನ ಕಬ್ಬು, ಮಾವು ಬೆಂಕಿಗಾಹುತಿ

By

Published : Dec 23, 2020, 10:31 AM IST

thumbnail

ಧಾರವಾಡ: ಶಾರ್ಟ್ ಸರ್ಕ್ಯೂಟ್ ಸುಮಾರು 9 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, 25 ಮಾವಿನ ಮರಗಳು ಸುಟ್ಟು ಭಸ್ಮಗೊಂಡಿರುವ ಘಟನೆ ದಡ್ಡಿ ಕಮಲಾಪುರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ದಡ್ಡಿ ಕಮಲಾಪುರದ ಅಶೋಕ ಮಾನೆ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬಗಳಿಂದ ತಂತಿಗಳು ಜೋತು ಬಿದ್ದಿದ್ದು, ಶಾರ್ಟ್ ಸರ್ಕ್ಯೂಟ್​​​ ಉಂಟಾಗಿ ಈ ದುರ್ಘಟನೆ ನಡೆದಿದೆ. ಇದರಿಂದ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದ್ದು, ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.