ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿ ವಿದ್ಯಾರ್ಥಿಗಳ ಉಡುಗೆ-ತೊಡುಗೆ ಸರಿಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

By

Published : Jan 26, 2022, 10:54 PM IST

thumbnail

ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆ ನಿಗದಿಪಡಿಸಿದ ಸಮವಸ್ತ್ರಗಳನ್ನು ಧರಿಸಿಕೊಂಡು ಬರಬೇಕು. ಇಲ್ಲದಿದ್ದರೆ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಾತಾವರಣ ನಿರ್ಮಾಣವಾಗಲು ನಾವು ಬಿಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿವಾದ ಸೃಷ್ಟಿಸುತ್ತಿರುವವರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ತುಮಕೂರಿನಲ್ಲಿ 'ಈಟಿವಿ ಭಾರತ' ಜೊತೆ ಮಾತನಾಡಿದ ಅವರು, ಎಲ್ಲರೂ ಭಾರತಮಾತೆಯ ಮಕ್ಕಳು. ಇದನ್ನು ವಿದ್ಯಾರ್ಥಿಗಳು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.