ಅವಕಾಶ ಸಿಕ್ಕರೆ ರಾಣೆಬೆನ್ನೂರು ನಗರಸಭೆ ಅಧಿಕಾರದ ಗದ್ದುಗೆ ಹಿಡಿಯುತ್ತೇವೆ: ಕೆ.ಬಿ.ಕೋಳಿವಾಡ

By

Published : Oct 28, 2020, 2:00 PM IST

thumbnail

ರಾಣೆಬೆನ್ನೂರು: ಅವಕಾಶ ಸಿಕ್ಕರೆ ರಾಣೆಬೆನ್ನೂರು ನಗರಸಭೆ ಅಧಿಕಾರದ ಗದ್ದುಗೆ ಹಿಡಿಯುತ್ತೇವೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ರಾಣೆಬೆನ್ನೂರಿನ ಸ್ವಗೃಹದಲ್ಲಿ ಮಾತನಾಡಿದ ಅವರು, ನಗರಸಭೆ ಅಧ್ಯಕ್ಷ ಚುನಾವಣೆ ಬಹಳ ಕಠಿಣವಾಗಿದೆ. ಬಿಜೆಪಿಯವರು 15 ಸ್ಥಾನಗಳನ್ನು ಪಡೆದಿದ್ದಾರೆ. ಕೆಪಿಜೆಪಿ ಪಕ್ಷದ ಆರ್.ಶಂಕರ್​​ 10 ಸ್ಥಾನ ಪಡೆದಿದ್ದು, ಕಾಂಗ್ರೆಸ್ ಪಕ್ಷ 9 ಸದಸ್ಯರು ಇರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ನಿರೀಕ್ಷೆ ಮಾಡುವುದು ಸೂಕ್ತವಲ್ಲ ಎಂದರು. ಸದ್ಯ ರಾಜಕೀಯದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಅನುಕೂಲ ಪರಿಸ್ಥಿತಿ ಬಂದರೆ ಸದುಪಯೋಗ ಪಡಿಸಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.