ಮಹೇಶ್​ ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ನಿರಾಸೆ ತರಿಸಿದೆ: ಬಸವ ಜಯಮೃತ್ಯುಂಜಯ ಶ್ರೀ

By

Published : Feb 7, 2020, 4:18 PM IST

thumbnail

ವಿಜಯಪುರ: ಅಥಣಿ ಶಾಸಕ ಮಹೇಶ್​ ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ನಿರಾಸೆ ತರಿಸಿದೆ ಎಂದು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಶ್ರೀ ಹೇಳಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮಾತನಾಡಿದ ಅವರು, ಅರ್ಹ ಶಾಸಕರಿಗೆಲ್ಲರಿಗೂ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಹೇಳಿದ್ದರು. ಗೋಕಾಕ್​ ಶಾಸಕ ರಮೇಶ್​ ಜಾರಕಿಹೊಳಿ ಜೊತೆಗೆ ಸರ್ಕಾರ ರಚಿಸುವಲ್ಲಿ ಕುಮಟಳ್ಳಿ ಪಾತ್ರ ಬಹುಮುಖ್ಯವಾಗಿತ್ತು ಎಂದರು. ಫೆ.12 ರಂದು ಪಂಚಮಸಾಲಿ ಸಮಾಜದ ಶಾಸಕರುಗಳ ಜೊತೆ ಸಮಾಲೋಚನೆ ನಡೆಸಿ, ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.