200 ಬಡ ಕುಟುಂಬಗಳಿಗೆ ದವಸ ಧಾನ್ಯ ವಿತರಿಸಿದ ಗೂಳಿಹಟ್ಟಿ ಶೇಖರ್
ಚಿತ್ರದುರ್ಗ: ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೊಸದುರ್ಗದಲ್ಲಿ ಸುಮಾರು 200ಕ್ಕೂ ಬಡವರ ಕುಟುಂಬಗಳಿಗೆ ತೆರಳಿ ಅಕ್ಕಿ, ಬೇಳೆ, ಸಕ್ಕರೆ, ಅಡುಗೆ ಎಣ್ಣೆ ಸೇರಿದಂತೆ ದಿನಸಿ ಸಾಮಗ್ರಿಗಳನ್ನು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗೋದಿಹಿಟ್ಟು, ಹಲ್ಲು ಉಜ್ಜುವ ಬ್ರಶ್, ಫೇಸ್ಟ್ ಸೇರಿದಂತೆ ಎಲ್ಲ ರೀತಿಯ ದಿನಸಿಯನ್ನು ತಮ್ಮ ಕಾರ್ಯಕರ್ತರೊಂದಿಗೆ ವಿತರಿಸಿ ಬಡವರ ಸಂಕಷ್ಟಕ್ಕೆ ಕೈ ಜೋಡಿಸಿದ್ದಾರೆ.