ಮೊದಲ ಕೊರೊನಾ ಲಸಿಕೆ ಪಡೆದ ಹೃದಯ ತಜ್ಞ ಡಾ.ದೇವಿಶೆಟ್ಟಿ
ಆನೇಕಲ್: ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ. ದೇವಿ ಪ್ರಸಾದ ಶೆಟ್ಟಿ ಅವರು ಕೋವಿಡ್ ಲಸಿಕೆ ಪಡೆದಿದ್ದಾರೆ. ಈ ಮೂಲಕ ಜನರಲ್ಲಿದ್ದ ಭಯವನ್ನು ಹೋಗಲಾಡಿಸಿ, ನಂಬಿಕೆ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ವೈದ್ಯರಿಗೆ ಲಸಿಕೆ ನೀಡಿ ಬಳಿಕ ಉಳಿದವರಿಗೆ ಲಸಿಕೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು ಭಾರತಕ್ಕೆ ಇದೊಂದು ಸುವರ್ಣಾವಕಾಶ, ಇದನ್ನು ಜನ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.