ಶಿವಕುಮಾರ್ ಪ್ರತಿಕೃತಿ ದಹಿಸಿ ನಾಯಕ ಸಮುದಾಯದ ಪ್ರತಿಭಟನೆ

By

Published : Mar 29, 2021, 3:24 PM IST

thumbnail

ಚಾಮರಾಜನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನಾಯಕ ಸಮುದಾಯದ ಮುಖಂಡರು ಡಿಕೆಶಿ ಪ್ರತಿಕೃತಿ ದಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂತೇಮರಹಳ್ಳಿ ವೃತ್ತದಲ್ಲಿ ಜಮಾಯಿಸಿದ ನಾಯಕ ಸಮುದಾಯದ ಮುಖಂಡರು ಕೆಲಕಾಲ ರಸ್ತೆ ಸಂಚಾರ ತಡೆದು ಶಿವಕುಮಾರ್ ವಿರುದ್ದ ಧಿಕ್ಕಾರ ಕೂಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣಕರ್ತರಾದ ರಮೇಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸಲು ಡಿಕೆಶಿ ಪರಿಶಿಷ್ಟ ಪಂಗಡದ ಯುವತಿಯನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.