ಹಿರೇಹಳ್ಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​ಗಳ ನಿರ್ಮಾಣಕ್ಕೆ ಯೋಜನೆ

By

Published : Sep 1, 2020, 2:24 PM IST

thumbnail

ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ಪುನಶ್ಚೇತನಗೊಂಡಿರುವ ಹಿರೆಹಳ್ಳಕ್ಕೆ ಮತ್ತೊಂದು ಹೊಸ ಕಳೆ ತರುವ ಚಿಂತನೆ ನಡೆದಿದೆ. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಈ ಬಗ್ಗೆ ಯೋಜನೆ ರೂಪಿಸಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ಮುಂಬರುವ ದಿನಗಳಲ್ಲಿ ಹಿರೇಹಳ್ಳದಲ್ಲಿ ವರ್ಷಪೂರ್ತಿ ನೀರು ಹರಿಯಲಿದೆ. ಸುಮಾರು 24 ಕಿಲೋ ಮೀಟರ್ ಉದ್ದವಿರುವ ಈ ಹಿರೇಹಳ್ಳದಲ್ಲಿ ಈಗಾಗಲೇ ಸಣ್ಣ ನೀರಾವರಿ ಇಲಾಖೆ ಮೂಲಕ 43 ಕೋಟಿ ರೂಪಾಯಿ ವೆಚ್ಚದಲ್ಲಿ ಆರೇಳು ಬ್ರಿಡ್ಜ್ ಕಂ ಬ್ಯಾರೇಜ್​ಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಕರ್ನಾಟಕ ನೀರಾವರಿ ನಿಗಮದ ಮೂಲಕ ಇನ್ನೊಂದಿಷ್ಟು ಬ್ರಿಡ್ಜ್ ಕಂ ಬ್ಯಾರೇಜ್​ನಿರ್ಮಾಸಿ ಹಿರೇಹಳ್ಳದಲ್ಲಿ ವರ್ಷಪೂರ್ತಿ ನೀರು ಹರಿಯುವಂತೆ ಮಾಡುವ ಚಿಂತನೆ ಚಿಗುರಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.