ಅತೀ ಹೆಚ್ಚು ದಿಶಾ ಸಭೆ ನಡೆಸಿದ ಸಂಸದೆ ಎಂಬ ಕೀರ್ತಿ: 'ಈಟಿವಿ ಭಾರತ'ಕ್ಕೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ
ಮಂಡ್ಯ: ರಾಜ್ಯದಲ್ಲೇ ಅತೀ ಹೆಚ್ಚು ದಿಶಾ ಸಭೆಗಳನ್ನು ನಡೆಸಿದ ಸಂಸದೆ ಎಂಬ ಕೀರ್ತಿ ಸಂಸದೆ ಸುಮಲತಾ ಅಂಬರೀಶ್ಗೆ ಲಭಿಸಿದೆ. ಕೊರೊನಾ ಸಂದರ್ಭದಲ್ಲಿ ಕೂಡ ಜಿಲ್ಲೆಯ ಅಭಿವೃದ್ಧಿಗಾಗಿ ಸುಮಲತಾ ತ್ರೈಮಾಸಿಕ ಸಭೆಗಳನ್ನು ನಡೆಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಜೊತೆಗೆ ಮೈಶುಗರ್ ಕಾರ್ಖಾನೆಯಲ್ಲಿ ಮಗನ ಸಿನಿಮಾ ಚಿತ್ರೀಕರಣದ ಕುರಿತಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಹಾಗೂ ತಮ್ಮ ವಿರೋಧಿಗಳಿಗೆ ಅಭಿವೃದ್ಧಿಯ ಮಾತಿನ ಮೂಲಕವೇ ಟಾಂಗ್ ನೀಡಿದ್ದಾರೆ.