ಅಪ್ಪು ನೆನೆದು ಕಣ್ಣೀರು ಹಾಕಿದ ಸಿಂಗಂ ಖ್ಯಾತಿಯ ತಮಿಳು ನಟ ಸೂರ್ಯ

By

Published : Nov 5, 2021, 12:25 PM IST

thumbnail

ಸಿಂಗಂ ಖ್ಯಾತಿಯ ತಮಿಳು ನಟ ಸೂರ್ಯ ಇಂದು ಪವರ್​ಸ್ಟಾರ್ ಪುನೀತ್​​ ರಾಜ್​​ಕುಮಾರ್​​ ಸಮಾಧಿಗೆ ಭೇಟಿ ನೀಡಿದ್ದರು. ಅಪ್ಪು ಸಮಾಧಿಗೆ ನಮನ ಸಲ್ಲಿಸಿದ ಅವರು ನೆಚ್ಚಿನ ನಟನನ್ನ ನೆನೆದು ಕಣ್ಣೀರು ಹಾಕಿದರು. ಬಳಿಕ ಮಾತನಾಡಿ, ಅಪ್ಪು ಅಗಲಿಕೆ ಸಹಿಸಲಾಗದು. ಅಣ್ಣಾವ್ರು ನನಗೆ ಮಾದರಿಯಾಗಿದ್ದರು. ಎಲ್ಲ ಫೋಟೋಗಳಲ್ಲೂ ಪುನೀತ್ ನಗ್ತಿದ್ರು. ಕನ್ನಡಿಗರಿಗೆ ನಾನು ಏನು ಹೇಳಬೇಕೋ ತೋಚುತ್ತಿಲ್ಲ.​ ದೇವರು ಪುನೀತ್ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.