ವಿಡಿಯೋ: ಕೆಸರಿನಲ್ಲಿ ಸಿಲುಕಿದ್ದ ಟ್ರ್ಯಾಕ್ಟರ್​ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

By

Published : Jul 14, 2022, 7:52 PM IST

thumbnail

ಬೆತುಲ್​(ಮಧ್ಯಪ್ರದೇಶ): ಕೆಸರಿನಲ್ಲಿ ಸಿಲುಕಿದ್ದ ಟ್ರ್ಯಾಕ್ಟರ್ ಹೊರ ತೆಗೆಯಲು ಹೋದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬೆತುಲ್​​ದಲ್ಲಿ ಕೆಸರಿನಲ್ಲಿ ಟ್ರ್ಯಾಕ್ಟರ್​​ವೊಂದು ಸಿಲುಕಿಕೊಂಡಿತ್ತು. ಅದನ್ನ ಹೊರ ತೆಗೆಯಲು ಯುವಕನೊಬ್ಬ ಮುಂದಾಗಿದ್ದಾನೆ. ಈ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಆತ ಸಾವನ್ನಪ್ಪಿದ್ದಾನೆ. ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ಮಳೆಯ ಕಾರಣ ಜಮೀನಿನಲ್ಲಿ ಟ್ರ್ಯಾಕ್ಟರ್ ಸಿಲುಕಿಕೊಂಡಿದೆ. ಈ ವೇಳೆ ಸುಖದೇವ್​​(29) ಅದನ್ನ ಹೊರತೆಗೆಯಲು ಮುಂದಾಗಿದ್ದಾನೆ. ಈ ವೇಳೆ ಪಲ್ಟಿಯಾಗಿದ್ದರಿಂದ ಕೆಸರಿನಲ್ಲಿ ಸಿಲುಕಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೋಸ್ಕರ ರವಾನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.