ನೂತನ ಧ್ವಜ ನೀತಿಗೆ ವಿರೋಧ: ಪ್ರಸನ್ನ ಹೆಗ್ಗೋಡು ನೇತೃತ್ವದಲ್ಲಿ ಧ್ವಜ ಸತ್ಯಾಗ್ರಹ

By

Published : Aug 12, 2022, 4:15 PM IST

thumbnail

ಕೇಂದ್ರ ಸರ್ಕಾರ ಖಾದಿ ಬದಲಿಗೆ ಪ್ಲಾಸ್ಟಿಕ್ ಮತ್ತು ಪಾಲಿಸ್ಟರ್ ಧ್ವಜಗಳನ್ನು ಬಳಸುವಂತೆ ನಿಯಮ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಹಾಗೂ ಖಾದಿ ಬಾವುಟ ಬಳಸಲು ಒತ್ತಾಯಿಸಿ ತುಮಕೂರಿನಲ್ಲಿ ಹಿರಿಯ ರಂಗಕರ್ಮಿ, ಚರಕ ಖ್ಯಾತಿಯ ಪ್ರಸನ್ನ ಹೆಗ್ಗೋಡು ನೇತೃತ್ವದಲ್ಲಿ ಧ್ವಜ ಸತ್ಯಾಗ್ರಹ ನಡೆಯಿತು. ಮಂಡಿಪೇಟೆ ಸಮೀಪದ ಸ್ವಾತಂತ್ರ್ಯ ಚೌಕದಲ್ಲಿ ನಡೆದ ಸತ್ಯಾಗ್ರಹದಲ್ಲಿ ಗಾಂಧಿವಾದಿಗಳು, ಸಹಜ ಬೇಸಾಯಗಾರರು, ಪ್ರಗತಿಪರರು, ಪರಿಸರ ಪ್ರೇಮಿಗಳು ಹಾಗೂ ಆಸಕ್ತ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.