ವಿಡಿಯೋ: ಲೀಲಾವತಿ ಆಸ್ಪತ್ರೆಯಲ್ಲಿ ಪತ್ನಿ ನವನೀತ್​​ ಆರೋಗ್ಯ ವಿಚಾರಿಸಿದ ಶಾಸಕ ರವಿ ರಾಣಾ!

By

Published : May 5, 2022, 7:43 PM IST

thumbnail

ಮುಂಬೈ: ಹನುಮಾನ್​​ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಂಸದೆ ನವನೀತ್ ಕೌರ್​ ಹಾಗೂ ಶಾಸಕ ರವಿ ರಾಣಾ ಜಾಮೀನು ಮೇಲೆ ಇಂದು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ನವನೀತ್​ ಕೌರ್​​ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅಲ್ಲಿಗೆ ಭೇಟಿ ನೀಡಿರುವ ಪತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ ಹಾಗೂ ಪತಿ ರವಿ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರುಗಡೆ ಹನುಮಾನ್​ ಚಾಲೀಸಾ ಪಠಿಸುವುದಾಗಿ ಘೋಷಣೆ ಮಾಡಿದ್ದರು. ಈ ಪ್ರಕರಣದಲ್ಲಿ ಇವರ ವಿರುದ್ಧ ಏಪ್ರಿಲ್ 23ರಂದು ರಾಜ್ಯದ್ರೋಹ ಆರೋಪದಡಿ ಪ್ರಕರಣ ದಾಖಲು ಮಾಡಿ, ಬಂಧನ ಮಾಡಲಾಗಿತ್ತು. ಏಪ್ರಿಲ್ 25ರಂದು ನವನೀತ್ ಕೌರ್​ ಹಾಗೂ ರವಿ ರಾಣಾ ಸೆಷನ್ಸ್ ಕೋರ್ಟ್​ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಅವರು ಬಿಡುಗಡೆಯಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.