ತಾಳಿಕೋಟೆಯಲ್ಲಿ ಖಾಸ್ಗತೇಶ್ವರ ಮಹಾಶಿವಯೋಗಿಗಳ ರಥೋತ್ಸವ: ಕೃತಾರ್ಥರಾದ ಭಕ್ತ ಸಮೂಹ
ವಿಜಯಪುರ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ತಾಳಿಕೋಟೆ ಖಾಸ್ಗತೇಶ್ವರ ಮಹಾಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ಜರುಗಿತು. ರಥೋತ್ಸವಕ್ಕೆ ಪೀಠಾಧೀಪತಿ ಸಿದ್ದಲಿಂಗ ದೇವರು ಚಾಲನೆ ನೀಡಿದರು. ಉತ್ತತ್ತಿ, ಬಾಳೆಹಣ್ಣುಗಳನ್ನು ರಥಕ್ಕೆ ಸಮರ್ಪಿಸಲಾಯಿತು. ಪೊಲೀಸರ ಬಿಗಿ ಭದ್ರತೆಯಲ್ಲಿ ರಥೋತ್ಸವ ಜರುಗಿತು.