ಭಾರಿ ಮಳೆಯಲ್ಲೇ ರಸ್ತೆಗೆ ಡಾಂಬರೀಕರಣ: ಮೂವರು ಪಿಡಬ್ಲ್ಯೂಡಿ ಇಂಜಿನಿಯರ್​ಗಳು ಸಸ್ಪೆಂಡ್​

By

Published : Jul 10, 2022, 3:22 PM IST

thumbnail

ಹೊಸಿಯಾರ್‌ಪುರ (ಪಂಜಾಬ್​): ಸುರಿಯುತ್ತಿದ್ದ ಭಾರಿ ಮಳೆಯಲ್ಲೇ ರಸ್ತೆಗೆ ಡಾಂಬರೀಕರಣ ಮಾಡಿಸಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂವರು ಇಂಜಿನಿಯರ್​ಗಳು ಸೇರಿ ನಾಲ್ವರನ್ನು ಪಂಜಾಬ್​ ಸರ್ಕಾರ ಅಮಾನತುಗೊಳಿಸಿದೆ. ಹೊಸಿಯಾರ್‌ಪುರ ಜಿಲ್ಲೆಯ ಶೇರ್‌ಪುರ್‌ ಢಕ್ಕನ್‌ ಗ್ರಾಮದಲ್ಲಿ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದ್ದರೂ ಡಾಂಬರೀಕರಣ ಮಾಡುತ್ತಿರುವುದನ್ನು ಕಂಡು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರೊಬ್ಬರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ವೈರಲ್​ ಆಗಿ ಭಾರಿ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಪಂಜಾಬ್ ಸರ್ಕಾರ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳಾದ ತಾರ್ಸೆಮ್ ಸಿಂಗ್, ವಿಪನ್ ಕುಮಾರ್, ಪ್ರವೀಣ್ ಕುಮಾರ್ ಮತ್ತು ಜಸ್ಬೀರ್ ಸಿಂಗ್ ಎಂಬುವವರನ್ನು ಅಮಾನತು ಮಾಡಿ ಬಿಸಿ ಮುಟ್ಟಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.