ETV Bharat / bharat

ಕಂದಕಕ್ಕೆ ಉರುಳಿದ ಖಾಸಗಿ ಬಸ್​: ಐದು ಮಂದಿ ದುರ್ಮರಣ, ಸಿಎಂ ಸ್ಟಾಲಿನ್ ಸಂತಾಪ - 5 killed in Yercaud bus accident

author img

By ETV Bharat Karnataka Team

Published : May 1, 2024, 1:47 PM IST

5 killed in Yercaud bus accident: Chief Minister M. K. Stalin's condolence
ಕಂದಕಕ್ಕೆ ಉರುಳಿದ ಖಾಸಗಿ ಬಸ್​: ಐದು ಮಂದಿ ದುರ್ಮರಣ, ಸಿಎಂ ಸ್ಟಾಲಿನ್ ಸಂತಾಪ

ನಿನ್ನೆ ಸಂಜೆ ಸೇಲಂ ಜಿಲ್ಲೆಯ ಯೆರ್ಕಾಡ್ ಮೌಂಟೇನ್ ಪಾಸ್​​ನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಐದು ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಾಂತ್ವನ ಹೇಳಿದ್ದಾರೆ.

ಸೇಲಂ, ತಮಿಳುನಾಡು: ಇಲ್ಲಿನ ಯೆರ್ಕಾಡ್ ಹಿಲ್ ರೋಡ್ ನಲ್ಲಿ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿ ಬಿದ್ದಿತ್ತು. ಈ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದರು. ಇದೀಗ ಆ ಸಾವಿನ ಸಂಖ್ಯೆ ಐದಕ್ಕೆ ಏರಿಕೆ ಆಗಿದೆ.

20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡು ಸೇಲಂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಇಂದು ಬೆಳಗ್ಗೆ 5ಕ್ಕೆ ಏರಿಕೆಯಾಗಿದೆ. ಮೃತರೆಲ್ಲರೂ ಸೇಲಂ ಜಿಲ್ಲೆಯವರು ಎಂದು ತಿಳಿದು ಬಂದಿದೆ.

ಏತನ್ಮಧ್ಯೆ, ಸೇಲಂ ಜಿಲ್ಲಾಧಿಕಾರಿ ಬೃಂದಾ ದೇವಿ ಅವರು 30 ಕಿಲೋಮೀಟರ್ ವೇಗದ ಮಿತಿಯನ್ನು ಮೀರಿದ ವಾಹನಗಳು ಮತ್ತು ನಿಯಮಗಳನ್ನು ಉಲ್ಲಂಘಿಸುವ ಚಾಲಕರ ವಿರುದ್ಧ ಕಟ್ಟುನಿಟ್ಟಾಗಿ ನಿಗಾ ವಹಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಸರ್ಕಾರದ ಸೂಚನೆಯನ್ನು ಮೀರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ. ಇನ್ನು ಅನುಭವಿ ಚಾಲಕರು ಮಾತ್ರ ವಾಹನ ಚಲಾಯಿಸಬೇಕು, ಯೇರ್ಕಾಡು ತಪ್ಪಲಿನ ಚೆಕ್ ಪೋಸ್ಟ್‌ನಲ್ಲಿ ಪೊಲೀಸ್ ಮತ್ತು ಸ್ಥಳೀಯ ಸಾರಿಗೆ ಇಲಾಖೆಯಿಂದ ತಪಾಸಣೆ ನಡೆಸಿದ ನಂತರವೇ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಇದೇ ವೇಳೆ ತಿಳಿಸಿದ್ದಾರೆ.

ಏತನ್ಮಧ್ಯೆ, ಯೆರ್ಕಾಡ್ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ. ಚುನಾವಣಾ ಆಯೋಗದಿಂದ ಅನುಮತಿ ಪಡೆದ ನಂತರ ಪರಿಹಾರ ಘೋಷಿಸಲಾಗುವುದು ಎಂದು ಅವರು ತಮ್ಮ ಎಕ್ಸ್ ಪೇಜ್‌ನಲ್ಲಿ ತಿಳಿಸಿದ್ದಾರೆ.

ಯೆರ್ಕಾಡ್ ಬೆಟ್ಟವು ಸೇಲಂ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣವಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಕ್ಕೆ ಸಾವಿರಾರು ಮಂದಿ ಭೇಟಿ ನೀಡುತ್ತಾರೆ.

ಇದನ್ನು ಓದಿ: ತಮಿಳುನಾಡಿನ ಕಲ್ಲಿನ ಕ್ವಾರಿಯಲ್ಲಿ ಭೀಕರ ಸ್ಫೋಟ: ಕಾರ್ಮಿಕರ ದಿನಾಚರಣೆ ದಿನವೇ ನಾಲ್ವರು ಕಾರ್ಮಿಕರ ಸಾವು - TERRIBLE EXPLOSION 4 died

ETV Bharat Logo

Copyright © 2024 Ushodaya Enterprises Pvt. Ltd., All Rights Reserved.