ETV Bharat / bharat

ಜಾರ್ಖಂಡ್‌ನಲ್ಲಿ ಎನ್​ಕೌಂಟರ್​: ಎಂಟು ಮಂದಿ ನಕ್ಸಲರು ಹತ - NAXALITES ENCOUNTER

ಜಾರ್ಖಂಡ್‌ನಲ್ಲಿ ನಕ್ಷಲ್​ ವಿರೋಧಿ ಕಾರ್ಯಾಚರಣೆ ಮುಂದುವರೆದಿದ್ದು, ಬೊಕಾರೊ ಜಿಲ್ಲೆಯಲ್ಲಿ ನಡೆದ ಎನ್​​ಕೌಂಟರ್​ನಲ್ಲಿ ಎಂಟು ಜನ ನಕ್ಸಲರು ಹತರಾಗಿದ್ದಾರೆ.

CoBRA-CRPF Joint Forces Gun Down 4 Naxals In Jharkhand
ಸಾಂದರ್ಭಿಕ ಚಿತ್ರ (ANI)
author img

By ETV Bharat Karnataka Team

Published : April 21, 2025 at 11:02 AM IST

1 Min Read

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕೇಂದ್ರ ಮೀಸಲು ಪೊಲೀಸ್​ನ (CRPF) ಕೋಬ್ರಾ ಪಡೆ ಹಾಗೂ ಪೊಲೀಸರು ಕೈಗೊಂಡ ಜಂಟಿ ಎನ್​​ಕೌಂಟರ್​ನಲ್ಲಿ ಕನಿಷ್ಠ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಲಾಲ್‌ಪಾನಿಯಾ ಪ್ರದೇಶದ ಲುಗು ಬೆಟ್ಟ ಪ್ರದೇಶದಲ್ಲಿ ಮುಂಜಾನೆ 5.30ರ ಸುಮಾರಿಗೆ ಪ್ರಾರಂಭವಾದ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪ್ರಮುಖವಾಗಿ, 209 ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (CoBRA) ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಎಂಟು ಮಂದಿ ನಕ್ಸಲರು ಹತರಾಗಿದ್ಧಾರೆ. ಅಲ್ಲದೆ, ಸ್ಥಳದಲ್ಲಿ ಎರಡು INSAS ರೈಫಲ್‌ಗಳು, ಒಂದು ಸ್ವಯಂ-ಲೋಡಿಂಗ್ ರೈಫಲ್ (SLR) ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋಬ್ರಾ ಪಡೆಯು ಸಿಆರ್‌ಪಿಎಫ್‌ನ ವಿಶೇಷ ಅರಣ್ಯ ಯುದ್ಧ ಘಟಕವಾಗಿದೆ. ಪೊಲೀಸ್ ಪ್ರಧಾನ ಕಚೇರಿಯ ಮಾಹಿತಿ ಪ್ರಕಾರ, ಹತ್ಯೆಗೀಡಾದ ನಕ್ಸಲರ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ನಕ್ಸಲೈಟ್ ವಿವೇಕ್ ತಂಡವು ಗುಂಡಿನ ಚಕಮಕಿಯಲ್ಲಿ ಭಾಗಿಯಾಗಿದೆ. ಅವರ ತಲೆಗೆ 1 ಕೋಟಿ ರೂ. ಬಹುಮಾನವಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾರ್ಚ್ 2026ರೊಳಗೆ ದೇಶದಲ್ಲಿ ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುವುದಾಗಿ ಕೇಂದ್ರ ಸರ್ಕಾರದ ಘೋಷಣೆ ಮಾಡಿದ್ದು, ಅದರ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.

ಮತ್ತೊಂದು ಬೆಳವಣಿಗೆಯಲ್ಲಿ, ನೆರೆಯ ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಇಂದು (ಸೋಮವಾರ) ಸಂಜೆ ನವದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿನ ನಕ್ಸಲ್ ವಿರೋಧಿ ಕಾರ್ಯಾಚರಣೆ ಹಾಗೂ ಸಂಬಂಧಿತ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ, ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 140ಕ್ಕೂ ಹೆಚ್ಚು ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ.

ಇದನ್ನೂ ಓದಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: 6 ಜನ ಸಾವು

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕೇಂದ್ರ ಮೀಸಲು ಪೊಲೀಸ್​ನ (CRPF) ಕೋಬ್ರಾ ಪಡೆ ಹಾಗೂ ಪೊಲೀಸರು ಕೈಗೊಂಡ ಜಂಟಿ ಎನ್​​ಕೌಂಟರ್​ನಲ್ಲಿ ಕನಿಷ್ಠ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಲಾಲ್‌ಪಾನಿಯಾ ಪ್ರದೇಶದ ಲುಗು ಬೆಟ್ಟ ಪ್ರದೇಶದಲ್ಲಿ ಮುಂಜಾನೆ 5.30ರ ಸುಮಾರಿಗೆ ಪ್ರಾರಂಭವಾದ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪ್ರಮುಖವಾಗಿ, 209 ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (CoBRA) ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಎಂಟು ಮಂದಿ ನಕ್ಸಲರು ಹತರಾಗಿದ್ಧಾರೆ. ಅಲ್ಲದೆ, ಸ್ಥಳದಲ್ಲಿ ಎರಡು INSAS ರೈಫಲ್‌ಗಳು, ಒಂದು ಸ್ವಯಂ-ಲೋಡಿಂಗ್ ರೈಫಲ್ (SLR) ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋಬ್ರಾ ಪಡೆಯು ಸಿಆರ್‌ಪಿಎಫ್‌ನ ವಿಶೇಷ ಅರಣ್ಯ ಯುದ್ಧ ಘಟಕವಾಗಿದೆ. ಪೊಲೀಸ್ ಪ್ರಧಾನ ಕಚೇರಿಯ ಮಾಹಿತಿ ಪ್ರಕಾರ, ಹತ್ಯೆಗೀಡಾದ ನಕ್ಸಲರ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ನಕ್ಸಲೈಟ್ ವಿವೇಕ್ ತಂಡವು ಗುಂಡಿನ ಚಕಮಕಿಯಲ್ಲಿ ಭಾಗಿಯಾಗಿದೆ. ಅವರ ತಲೆಗೆ 1 ಕೋಟಿ ರೂ. ಬಹುಮಾನವಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾರ್ಚ್ 2026ರೊಳಗೆ ದೇಶದಲ್ಲಿ ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುವುದಾಗಿ ಕೇಂದ್ರ ಸರ್ಕಾರದ ಘೋಷಣೆ ಮಾಡಿದ್ದು, ಅದರ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.

ಮತ್ತೊಂದು ಬೆಳವಣಿಗೆಯಲ್ಲಿ, ನೆರೆಯ ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಇಂದು (ಸೋಮವಾರ) ಸಂಜೆ ನವದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿನ ನಕ್ಸಲ್ ವಿರೋಧಿ ಕಾರ್ಯಾಚರಣೆ ಹಾಗೂ ಸಂಬಂಧಿತ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ, ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 140ಕ್ಕೂ ಹೆಚ್ಚು ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ.

ಇದನ್ನೂ ಓದಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: 6 ಜನ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.