ETV Bharat / bharat

ಕೇಜ್ರಿವಾಲ್​ಗೆ ಮತ್ತೆ ಸಂಕಷ್ಟ; ಏಪ್ರಿಲ್​ 15ರ ವರೆಗೆ ನ್ಯಾಯಾಂಗ ಬಂಧನದಲ್ಲಿ ದೆಹಲಿ ಸಿಎಂ - Liquor Policy Case

author img

By ETV Bharat Karnataka Team

Published : Apr 1, 2024, 12:29 PM IST

Updated : Apr 1, 2024, 12:39 PM IST

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿ ಅಂತ್ಯಗೊಂಡಿದ್ದರಿಂದ ಇಡಿ ಸೋಮವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು.

ROUSE AVENUE COURT  ARVIND KEJRIWAL CUSTODY  DELHI CM REMANDED  JUDICIAL CUSTODY TILL APRIL
ಏಪ್ರಿಲ್​ 15ರವರೆಗೆ ಇಡಿ ಹಿಡಿತದಲ್ಲಿ ದೆಹಲಿ ಸಿಎಂ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಸಹಕಾರ ವರ್ತನೆಯನ್ನು ಉಲ್ಲೇಖಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರನ್ನು ಸೋಮವಾರ ನಗರದ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮದ್ಯ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಿಂದ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಂಬಂಧಿಸಿದ ಎರಡು ಪ್ರಕರಣಗಳನ್ನು ಇಂದು (ಏಪ್ರಿಲ್ 1) ಎರಡು ವಿಭಿನ್ನ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಲಾಯಿತು.

ಮೊದಲ ಪ್ರಕರಣ ಕೇಜ್ರಿವಾಲ್ ಜೈಲಿನಿಂದ ಸರ್ಕಾರದ ಆದೇಶದ ವಿರುದ್ಧವಾಗಿತ್ತು. ಸುರ್ಜಿತ್ ಸಿಂಗ್ ಯಾದವ್ ಅವರು ಜೈಲಿನಿಂದ ಸರ್ಕಾರಿ ಆದೇಶಗಳನ್ನು ನೀಡುವುದನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದನ್ನು ಆಲಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಪೀಠವು ಅರ್ಜಿಯನ್ನು ತಿರಸ್ಕರಿಸಿತು.

ಎರಡನೇ ವಿಷಯವೆಂದರೆ ಕೇಜ್ರಿವಾಲ್ ಅವರ ಇಡಿ ರಿಮಾಂಡ್ ಇಂದಿಗೆ ಕೊನೆಗೊಂಡಿತ್ತು. ಇಡಿ ಇಂದು ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಮಾಡುತ್ತಿರುವುದು ದೇಶಕ್ಕೆ ಒಳ್ಳೆಯದಲ್ಲ ಎಂದರು. ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ನ್ಯಾಯಾಂಗ ಬಂಧನ ವಿಸ್ತರಣೆ: ನಾವು ನ್ಯಾಯಾಂಗ ಬಂಧನಕ್ಕೆ ಒತ್ತಾಯಿಸುತ್ತಿದ್ದೇವೆ. ಕೇಜ್ರಿವಾಲ್ ನಮಗೆ ಯಾವುದೇ ಬೆಂಬಲ ನೀಡುತ್ತಿಲ್ಲ. ಅವರು ನಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ವಿಜಯ್ ನಾಯರ್ ಅವರಿಗೆ ವರದಿ ಮಾಡುವುದಿಲ್ಲ ಎಂದು ಅವರು ನಮಗೆ ತಿಳಿಸಿದರು. ಪೈರೋಟೆಕ್ನಿಕ್ಸ್ ಮಾಡೋಣ ಎಂದು ಇಡಿ ನ್ಯಾಯಾಲಯದ ಮುಂದೆ ಹೇಳಿತು.

ನ್ಯಾಯಾಂಗ ಬಂಧನಕ್ಕೆ ಈ ವಾದಗಳು ಎಷ್ಟು ಮಾನ್ಯವಾಗಿವೆ ಎಂದು ನ್ಯಾಯಾಲಯ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಇಡಿ ಕೇಜ್ರಿವಾಲ್ ತಮ್ಮ ಫೋನ್ ಪಾಸ್‌ವರ್ಡ್ ಅನ್ನು ಹಂಚಿಕೊಳ್ಳುತ್ತಿಲ್ಲ. ನಾವು ನಮ್ಮ ಕಸ್ಟಡಿಗೆ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಇಡಿ ಮನವಿ ಮಾಡಿಕೊಂಡಿತು. ವಾದ ಆಲಿಸಿದ ಬಳಿಕ ನ್ಯಾಯಾಲಯ ಕೇಜ್ರಿವಾಲ್​ ಅವರನ್ನು ಮುಂದಿನ 15 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಇಂದಿಗೆ ಕಸ್ಟಡಿ ಅಂತ್ಯ: ದೆಹಲಿ ಸಿಎಂ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವನ್ನು ಉಲ್ಲೇಖಿಸಿ ಇಡಿ ಕೇಜ್ರಿವಾಲ್ ಅವರ ಕಸ್ಟಡಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿತ್ತು. ಆದರೆ ಮಾರ್ಚ್ 28 ರಂದು ನ್ಯಾಯಾಲಯವು ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿತ್ತು.

ಅರವಿಂದ್ ಕೇಜ್ರಿವಾಲ್ ಜೈಲಿನಿಂದ ದೆಹಲಿಯ ಆಡಳಿತ ನಡೆಸುತ್ತಿದ್ದು, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಆದೇಶವನ್ನು ಸಂಪುಟಕ್ಕೆ ರವಾನಿಸಿದ್ದಾರೆ. ಸುನೀತಾ ಅವರು ಆಪ್ ಇಂಡಿಯಾ ಬ್ಲಾಕ್‌ನ 'ಲೋಕತಂತ್ರ ಬಚಾವೋ' ರ್‍ಯಾಲಿಯಲ್ಲಿ ಭಾಗವಹಿಸಿದರು. ಅಲ್ಲಿ ಅವರು ಕೇಜ್ರಿವಾಲ್ ಅವರನ್ನು 'ಸ್ವಾತಂತ್ರ್ಯ ಹೋರಾಟಗಾರ' ಎಂದು ಉಲ್ಲೇಖಿಸಿದರು. ಜನವರಿಯಲ್ಲಿ ಇಡಿಯಿಂದ ಬಂಧನಕ್ಕೊಳಗಾದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡುವಂತೆ ರ್‍ಯಾಲಿಯಲ್ಲಿದ್ದ ವಿರೋಧ ಪಕ್ಷದ ಉನ್ನತ ನಾಯಕರು ಒತ್ತಾಯಿಸಿದರು.

ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಲಾಯಿತು ಮತ್ತು ನಂತರ ದೆಹಲಿ ನ್ಯಾಯಾಲಯದಿಂದ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ಒಪ್ಪಿಸಲಾಯಿತು. ನಿರ್ದಿಷ್ಟ ವ್ಯಕ್ತಿಗಳಿಗೆ ಅನುಕೂಲವಾಗುವ ಅಬಕಾರಿ ನೀತಿಯ ರಚನೆಗೆ ಸಂಬಂಧಿಸಿದ ಪಿತೂರಿಯಲ್ಲಿ ನೇರವಾಗಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಮಾರ್ಚ್ 28 ರಂದು ಅವರ ಆರಂಭಿಕ ಕಸ್ಟಡಿ ಮುಗಿದ ನಂತರ, ಸ್ಥಳೀಯ ನ್ಯಾಯಾಲಯವು ಕೇಜ್ರಿವಾಲ್ ಅವರ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ಅಂದ್ರೆ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿತು. ಇಡಿಯಿಂದ ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಈ ಪ್ರಕರಣವು ದೆಹಲಿ ಅಬಕಾರಿ ನೀತಿ ಪ್ರಕರಣ 2022 ರ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಯಿತು. ನ್ಯಾಯಾಲಯದ ಮುಂದೆ ತನ್ನ ವಾದದಲ್ಲಿ, ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆಯಿಡುವಲ್ಲಿ ದೆಹಲಿಯ ಸಿಎಂ ಪ್ರಮುಖ ಸಂಚುಕೋರ ಮತ್ತು ಕಿಂಗ್‌ಪಿನ್ ಎಂದು ಇಡಿ ಆರೋಪಿಸಿದೆ. ಅಬಕಾರಿ ನೀತಿಯ ರಚನೆಯಲ್ಲಿ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಓದಿ: ಅತ್ತಿಗೆ-ನಾದಿನಿ ಫೈಟ್​; ಬಾರಾಮತಿಯಲ್ಲಿ ಸುಪ್ರಿಯಾ ಸುಳೆ ವಿರುದ್ಧ ಅಜಿತ್ ಪವಾರ್ ಪತ್ನಿ ಸ್ಪರ್ಧೆ! - Pawar vs Pawar

Last Updated :Apr 1, 2024, 12:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.