ETV Bharat / bharat

ವಿವಿಧ ಪ್ರಕರಣ: ಭೂಪೇಂದ್ರ ಹೂಡಾ, ಲಾಲೂ ಪ್ರಸಾದ್​ ವಿಚಾರಣೆ.. ಸೊರೇನ್ ಮನೆಗೆ ಇಡಿ, ದೆಹಲಿಗೆ ಸಿಎಂ ಹೇಮಂತ್​​​

author img

By ETV Bharat Karnataka Team

Published : Jan 29, 2024, 8:16 PM IST

Updated : Jan 29, 2024, 8:37 PM IST

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸಕ್ಕೆ ಇಡಿ ತಂಡ ಆಗಮಿಸಿದ ಮಾಹಿತಿ ಲಭ್ಯವಾಗಿದೆ.

ಭೂಪೇಂದ್ರ ಹೂಡಾ, ಲಾಲೂ ಪ್ರಸಾದ್​
ಭೂಪೇಂದ್ರ ಹೂಡಾ, ಲಾಲೂ ಪ್ರಸಾದ್​

ರಾಂಚಿ (ಜಾರ್ಖಂಡ್​) : ಮುಖ್ಯಮಂತ್ರಿ ಹೇಮಂತ್ ಸೊರೇನ್ ದೆಹಲಿ ಪ್ರವಾಸದಲ್ಲಿದ್ದಾರೆ. ಏತನ್ಮಧ್ಯೆ, ಇಂದು ಇಡಿ ತಂಡ ದೆಹಲಿಯಲ್ಲಿರುವ ಅವರ ನಿವಾಸಕ್ಕೆ ತೆರಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 29 ಮತ್ತು 31ರ ನಡುವೆ ವಿಚಾರಣೆಗೆ ಹಾಜರಾಗುವಂತೆ ಇಡಿ ಕಳೆದ ವಾರವೇ ಹೊಸ ಸಮನ್ಸ್ ಜಾರಿ ಮಾಡಿತ್ತು.

ಜನವರಿ 27 ರಂದು ಸಿಎಂ ಹೇಮಂತ್ ಸೊರೇನ್ ರಾತ್ರಿ 8:00 ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ, ಜಾರ್ಖಂಡ್ ಪೊಲೀಸರಿಗೆ ಜಾಗರೂಕರಾಗಿರಲು ತಿಳಿಸಲಾಗಿದೆ. ಆದರೆ ವಿಚಾರಣೆಗೆ ಸಿಎಂ ಹಾಜರಾದರಾ ಇಲ್ಲವೇ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಆದರೆ ಅವರು ಇಡಿ ಅಧಿಕಾರಿಗಳಿಗೆ ಅನ್​​ ರೀಚೇಬಲ್​ ಆಗಿದ್ದಾರೆ ಎನ್ನಲಾಗಿದೆ.

ಇಡಿಗೆ ಹೇಮಂತ್​​ ಸೊರೇನ್ ಕಚೇರಿಯಿಂದ ಪತ್ರ:​ ಜಾರ್ಖಂಡ್​ ಸಿಎಂ ಹೇಮಂತ್ ಸೊರೇನ್ ಅವರ ಕಚೇರಿಯಿಂದ ಇಡಿಗೆ ಮೇಲ್ ಕಳುಹಿಸಲಾಗಿದೆ. ಅದರಲ್ಲಿ ಹೇಮಂತ್ ಸೊರೆನ್ ಜನವರಿ 31 ರಂದು ಇಡಿ ಕಚೇರಿಗೆ ಹಾಜರಾಗಲಿದ್ದಾರೆ ಎಂದು ತಿಳಿಸಲಾಗಿದೆ ಎಂದು ವರದಿಯಾಗಿದೆ.

ಇಡಿ ಮುಂದೆ ಲಾಲು ಪ್ರಸಾದ್ ಯಾದವ್ ಹಾಜರು: ಮತ್ತೊಂದು ಕಡೆ ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್​ ಯಾದವ್​ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಈ ಕುರಿತು ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಒಂದರ ಹಿಂದೆ ಒಂದರಂತೆ ಐದು ಪೋಸ್ಟ್‌ಗಳನ್ನು ಮಾಡಿದ್ದಾರೆ. ಇಡಿ ವಿಚಾರಣೆ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ತಂದೆಗೆ ಏನಾದರೂ ಆದರೆ, ಸಿಬಿಐ-ಇಡಿ ಜೊತೆಗೆ ಗೋಸುಂಬೆ ಮತ್ತು ಅದರ ಮಾಲೀಕರು ಅದಕ್ಕೆ ಹೊಣೆಯಾಗುತ್ತಾರೆ ಎಂದು ಸಿಎಂ ನಿತೀಶ್ ಅವರ ಹೆಸರನ್ನು ಹೇಳದೆ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಇಡಿ ಕಚೇರಿಗೆ ಲಾಲು ಯಾದವ್ ಭೇಟಿ : ಬಿಹಾರದಲ್ಲಿ ಆರ್‌ಜೆಡಿಯನ್ನು ರಾತ್ರೋರಾತ್ರಿ ಸರ್ಕಾರದಿಂದ ಹೊರಹಾಕಲಾಗಿದೆ. ಪೂರ್ವ ಯೋಜಿತ ಕಾರ್ಯಕ್ರಮದಂತೆ ಇಂದು ಲಾಲು ಯಾದವ್ ಅವರನ್ನು ಇಡಿ ಮುಂದೆ ಹಾಜರುಪಡಿಸಲಾಗುತ್ತಿದೆ. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರ ಮಗಳು ರೋಹಿಣಿ ಆಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್‌ಗೆ ಸಮನ್ಸ್ ಜಾರಿ ಮಾಡಿತ್ತು. ಇದಾದ ಬಳಿಕ ಇಂದು ಲಾಲು ಪ್ರಸಾದ್ ಯಾದವ್ ಇಡಿ ಮುಂದೆ ಹಾಜರಾಗಿದ್ದಾರೆ. ಇಂದು ತೇಜಸ್ವಿಯವರನ್ನೂ ವಿಚಾರಣೆಗೆ ಕರೆಯಲಾಗಿದೆ. ಆದರೆ ಅವರು ಬರುವುದಿಲ್ಲ ಎಂದು ಸುದ್ದಿಯಾಗಿದೆ.

ಏನಿದು ಉದ್ಯೋಗಕ್ಕಾಗಿ ಭೂ ಹಗರಣ ? : ವಾಸ್ತವವಾಗಿ 2004 ಮತ್ತು 2009ರ ನಡುವೆ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್​ ಯಾದವ್ ಅವರು ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದರು. ಈ ಅವಧಿಯಲ್ಲಿ ಅವರು ಹಾಗೂ ಅವರ ಕುಟುಂಬಸ್ಥರು ರೈಲ್ವೆ ಉದ್ಯೋಗ ಕೊಡಿಸಲು ಆಸ್ತಿಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದರು ಎಂಬ ಆರೋಪ ಇವರ ಕುಟುಂಬದ ಮೇಲೆ ಇದೆ.

ಭೂಪೇಂದ್ರ ಸಿಂಗ್ ಹೂಡಾ ಇಡಿ ಕಚೇರಿಯಲ್ಲಿ ವಿಚಾರಣೆ: ಇನ್ನೊಂದು ಕಡೆ ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ ಅವರ ಸಂಕಷ್ಟಗಳು ಕೊನೆಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಭೂಪೇಂದ್ರ ಸಿಂಗ್ ಹೂಡಾ ಮತ್ತೊಮ್ಮೆ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ (ಇಡಿ) ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೆಹಲಿಯಲ್ಲಿರುವ ಕೇಂದ್ರ ತನಿಖಾ ಸಂಸ್ಥೆ ಇಡಿ ಕೇಂದ್ರ ಕಚೇರಿಯಲ್ಲಿ ಹೂಡಾ ಅವರ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣ: ಲಾಲು ಪ್ರಸಾದ್​​ ಯಾದವ್, ಪತ್ನಿ, ಮಗನಿಗೆ ಜಾಮೀನು

Last Updated :Jan 29, 2024, 8:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.