ರುದ್ರಪ್ರಯಾಗ(ಉತ್ತರಾಖಂಡ): ಉತ್ತರಾಖಂಡದ ಕೇದಾರನಾಥ ಸಮೀಪ ಇಂದು ಹೆಲಿಕಾಪ್ಟರ್ ಪತನಗೊಂಡಿದ್ದು, ಮಗು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ 5.30ರ ಸುಮಾರಿಗೆ ಕೇದಾರನಾಥದಿಂದ ಗುಪ್ತಕಾಶಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಹೆಲಿಕಾಪ್ಟರ್ ಗೌರಿಕುಂಡ್-ಸೋನ್ಪ್ರಯಾಗ್ ಅರಣ್ಯದಲ್ಲಿ ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒಂದು ವಾರದ ಅಂತರದಲ್ಲಿ 2ನೇ ಅಪಘಾತ: ಜೂನ್ 7ರಂದು ಕೇದಾರನಾಥ ಯಾತ್ರೆ ಸಾಗುವ ಮಾರ್ಗದಲ್ಲಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಬಡಾಸು ಹೆಲಿಪ್ಯಾಡ್ನಿಂದ ಈ ಹೆಲಿಕಾಪ್ಟರ್ ಟೇಕ್ಆಪ್ ಆಗಿತ್ತು. ಆದರೆ, ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರನ್ನು ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯ ಬಡಾಸು ಬಳಿ ಹೆಲಿಪ್ಯಾಡ್ ಸಮೀಪದ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು. ಈ ಹೆಲಿಕಾಪ್ಟರ್ ಕ್ರಿಸ್ಟಲ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಸೇರಿತ್ತು. ಪೈಲಟ್ ಸೇರಿದಂತೆ 6 ಮಂದಿ ಪ್ರಯಾಣಿಸುತ್ತಿದ್ದರು. ಪೈಲಟ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರು ಪಾರಾಗಿದ್ದರು.
#WATCH | Rudraprayag, Uttarakhand: Today, a helicopter operating a flight on the sector Shri Kedarnath to Guptkashi was involved in an accident. A total of 07 people were on board this helicopter, who died on the spot. Rescue teams were immediately dispatched under the direction… pic.twitter.com/DFSa7glmrI
— ANI (@ANI) June 15, 2025
ಮೇ ತಿಂಗಳ 8ರಂದು ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪೈಲಟ್ ಸೇರಿ 6 ಯಾತ್ರಿಕರು ಸಾವನ್ನಪ್ಪಿದ್ದರು.
ಇದನ್ನೂ ಓದಿ: ಕೇದಾರನಾಥ್ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್: ತಪ್ಪಿದ ಅನಾಹುತ