ETV Bharat / bharat

ಭಯಾನಕ ರಸ್ತೆ ಅಪಘಾತ; 17 ಮಹಿಳೆಯರು ಸೇರಿ 19 ಆದಿವಾಸಿಗಳು ಸಾವು, ಹಲವರಿಗೆ ಗಂಭೀರ ಗಾಯ - Accident In Kawardha

author img

By ETV Bharat Karnataka Team

Published : May 20, 2024, 3:42 PM IST

Updated : May 20, 2024, 4:06 PM IST

ಕವರ್ಧಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 19 ಬೈಗಾ ಆದಿವಾಸಿಗಳು ಸಾವನ್ನಪ್ಪಿದ್ದಾರೆ. ಇದೇ ವೇಳೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

kawardha
ಕವರ್ಧಾ (ETV Bharat)

ಕವರ್ಧಾ (ಛತ್ತೀಸ್​ಗಢ) : ಟೆಂಡು ಎಲೆಗಳನ್ನು ಕಿತ್ತು ಕಾಡಿನಿಂದ ಹಿಂದಿರುಗುತ್ತಿದ್ದ 17 ಮಹಿಳೆಯರು ಸೇರಿ 19 ಬೈಗಾ ಆದಿವಾಸಿಗಳು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕವರ್ಧಾದಲ್ಲಿ ನಡೆದಿದೆ. ಈ ವೇಳೆ, 20ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ದಾರಿ ಮಧ್ಯೆ ಪಿಕಪ್ ವಾಹನ ನಿಯಂತ್ರಣ ತಪ್ಪಿ 20 ಅಡಿ ಹೊಂಡಕ್ಕೆ ಬಿದ್ದು ಪಲ್ಟಿಯಾಗಿದೆ. ವಾಹನದಲ್ಲಿ ಸುಮಾರು 35 ರಿಂದ 40 ಮಂದಿ ಇದ್ದರು. ಇವರೆಲ್ಲರೂ ಸೆಮ್ಹಾರ ಗ್ರಾಮದ ನಿವಾಸಿಗಳು ಎಂಬುದಾಗಿ ತಿಳಿದು ಬಂದಿದೆ.

18ಕ್ಕೂ ಹೆಚ್ಚು ಬೈಗಾ ಆದಿವಾಸಿಗಳ ಸಾವು : ಈ ಘಟನೆಯು ಕವರ್ಧಾದ ಕುಕ್ದೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಹಪಾನಿ ಗ್ರಾಮದ ಬಳಿ ನಡೆದಿದೆ. ಘಟನೆ ಬಳಿಕ ಸ್ಥಳದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ತಂಡ ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಏತನ್ಮಧ್ಯೆ, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಹಿಂದೆ ದುರ್ಗ್‌ನಲ್ಲಿ ಅಪಘಾತ ಸಂಭವಿಸಿತ್ತು: ಇದಕ್ಕೂ ಮೊದಲು ಏಪ್ರಿಲ್ 9 ರಂದು ದುರ್ಗದ ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕುಮ್ಹಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಡಿಯಾ ಕಂಪನಿಯ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ 25 ಅಡಿ ಆಳದ ಕಂದಕಕ್ಕೆ ಪಲ್ಟಿಯಾಗಿತ್ತು. ಈ ದುರ್ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ : ಬೆಂಗಳೂರಲ್ಲಿ ಪಾನಮತ್ತ ಕಾರು ಚಾಲಕನಿಂದ ಅಪಘಾತ: ಬೈಕ್ ಸವಾರ ಸಾವು - Car Hits Bike

Last Updated : May 20, 2024, 4:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.