ETV Bharat / bharat

ದೆಹಲಿ ಅಬಕಾರಿ ನೀತಿ ಪ್ರಕರಣ; ಕವಿತಾ ವಿಚಾರಣೆಗೆ ಹಾಜರಾಗುತ್ತಿಲ್ಲ, ಸುಪ್ರೀಂಗೆ ಇಡಿ ವಿವರಣೆ

author img

By ETV Bharat Karnataka Team

Published : Feb 6, 2024, 6:45 AM IST

'K Kavitha avoiding summons, not appearing....': ED to SC in Delhi excise policy case
ದೆಹಲಿ ಅಬಕಾರಿ ನೀತಿ ಪ್ರಕರಣ: ಕವಿತಾ ಸಮನ್ಸ್​​ಗೆ ಸ್ಪಂದಿಸುತ್ತಿಲ್ಲ ವಿಚಾರಣೆಗೆ ಹಾಜರಾಗುತ್ತಿಲ್ಲ: ಸುಪ್ರೀಂಗೆ ಇಡಿ ವಿವರಣೆ

ಇಡಿ ಸಮನ್ಸ್​ಗೆ ಕೆ ಕವಿತಾ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಇಡಿ ಸುಪ್ರೀಂಕೋರ್ಟ್ ಮುಂದೆ ಹೇಳಿದೆ. ಈ ನಡುವೆ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ16ಕ್ಕೆ ಮುಂದೂಡಿದೆ.

ನವದೆಹಲಿ: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಪುತ್ರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಮನ್ಸ್​ಗೆ ಸ್ಪಂದಿಸುತ್ತಿಲ್ಲ ಹಾಗೂ ಇಡಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಸೋಮವಾರ ಸುಪ್ರೀಂಕೋರ್ಟ್​ಗೆ ಹೇಳಿದೆ. ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಕೆ ಕವಿತಾ ಹಾಜರಾಗುತ್ತಿಲ್ಲ ಎಂದು ಸುಪ್ರೀಂಕೋರ್ಟ್​ಗೆ ಇಡಿ ವಿವರಣೆ ನೀಡಿದೆ.

ಈ ಸಂಬಂಧಿತ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್​​​​​ ಫೆಬ್ರವರಿ 16ಕ್ಕೆ ಮುಂದೂಡಿದೆ. ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಸುಪ್ರೀಂ ಪೀಠದ ಮುಂದೆ ತಮ್ಮ ವಾದ ಮಂಡಿಸಿದರು. ಕವಿತಾ ಅವರು ಸಮನ್ಸ್​​​​​ಗೆ ಯಾವುದೇ ಉತ್ತರ ನೀಡುತ್ತಿಲ್ಲ ಹಾಗೂ ಜಾರಿ ನಿರ್ದೇಶನಾಲಯದ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಮನಕ್ಕೆ ತಂದರು. ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುವವರೆಗೆ ಕವಿತಾ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದ್ದರು ಎಂಬ ವಿಚಾರವನ್ನು ಕೋರ್ಟ್​ ಗಮನಕ್ಕೆ ತಂದರು. ಈ ವೇಳೆ, ಮಧ್ಯ ಪ್ರವೇಶಿಸಿದ ಸಾಲಿಸಿಟರ್ ಜನರಲ್​​, ಸುಪ್ರೀಂಕೋರ್ಟ್​ ವಿಚಾರಣೆ ನಡೆಸುವವರೆಗೂ ಅಲ್ಲ ಮುಂದಿನ ವಿಚಾರಣೆವರೆಗೆ ಮಾತ್ರ ಎಂದು ಹೇಳಲಾಗಿತ್ತು ಎಂದು ಸ್ಪಷ್ಟನೆ ನೀಡಿದರು. ಮುಂದಿನ ವಿಚಾರಣೆಯ ವೇಳೆ ಸಮಸ್ಯೆ ಪರಿಶೀಲಿಸುವುದಾಗಿ ಪೀಠ ಹೇಳಿದೆ.

ಪ್ರಕರಣದ ಸಂಕ್ಷಿಪ್ತ ವಿಚಾರಣೆಯ ನಂತರ, ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ಪ್ರಕರಣದ ಅಂತಿಮ ವಿಚಾರಣೆಗೆ ಪಟ್ಟಿ ಮಾಡಬಹುದು ಎಂದು ಸಿಬಲ್ ಹೇಳಿದರು. ಆ ಬಳಿಕ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಮುಂದೂಡಿತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನ ನ್ಯಾಯಾಲಯ ಆಲಿಸುವವರೆಗೆ ಕವಿತಾ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ ಎಂದು ಇಡಿ ಹೇಳಿತ್ತು. ನಂತರ ಸುಪ್ರೀಂ ಕೋರ್ಟ್ ನಾವು ಪ್ರಕರಣದ ವಿಚಾರಣೆ ನಡೆಸಬೇಕಿದೆ. ಈ ಸಮಯದಲ್ಲಿ ಅವರನ್ನು ವಿಚಾರಣೆಗೆ ಕರೆಯಬೇಡಿ ಎಂದು ಹೇಳಿತ್ತು. ಸೆಪ್ಟೆಂಬರ್ 15 ರಂದು ಜಾರಿ ನಿರ್ದೇಶನಾಲಯ ನವದೆಹಲಿ ಕಚೇರಿಗೆ ಹಾಜರಾಗುವಂತೆ ಕೋರಿ ಸೆಪ್ಟೆಂಬರ್ 4 ರಂದು ಸಮನ್ಸ್ ಜಾರಿ ಮಾಡಿತ್ತು.

ಇದನ್ನು ಓದಿ:'ಪ್ರಜಾಪ್ರಭುತ್ವದ ಕಗ್ಗೊಲೆ': ಚಂಡೀಗಢ ಮೇಯರ್ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.