ನಾಸಿಕ್ (ಮಹಾರಾಷ್ಟ್ರ): ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಚಂದವಾಡದ ರಾಹುದ್ ಘಾಟ್ನಲ್ಲಿ ಎಸ್ಟಿ ಬಸ್ ಮತ್ತು ಟ್ರಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸುಮಾರು 8 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿದೆ.
ಗಾಯಾಳುಗಳನ್ನು ಚಂದವಾಡದ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತದಿಂದಾಗಿ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಅಪಘಾತದ ರಭಸಕ್ಕೆ ಎಸ್ಟಿ ಬಸ್ ಟ್ರಕ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ರಾಹುದ್ ಘಾಟ್ನಲ್ಲಿ ನಿತ್ಯ ಅಪಘಾತ: ಮುಂಬೈ-ಆಗ್ರಾ ಹೆದ್ದಾರಿಯ ಚಂದವಾಡ ಬಳಿಯ ರಾಹುದ್ ಘಾಟ್ ತುಂಬಾ ಅಪಾಯಕಾರಿಯಾಗಿದೆ. ಈ ಘಾಟ್ನಲ್ಲಿ ನಿತ್ಯ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಈ ಹಿಂದೆ ಇಲ್ಲಿ ಎಸ್ಟಿ ಬಸ್ ಅಪಘಾತವಾಗಿತ್ತು. ಆಗ ಕೆಲವರ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಸ್ಥಳವನ್ನು ಆರ್ಟಿಒ 'ಅಪಘಾತ ವಲಯ' (Accident zone) ಎಂದು ಘೋಷಿಸಿದೆ. ಈ ಸ್ಥಳದಲ್ಲಿ ಅಪಘಾತಗಳನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ನಾಗರಿಕರ ಒತ್ತಾಯವಾಗಿದೆ.