ETV Bharat / bharat

ಇಂದು ಸುಪ್ರೀಂನಿಂದ ಎಲೆಕ್ಟೋರಲ್​ ಬಾಂಡ್ಸ್​​​​ ಸ್ಕೀಂ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ತೀರ್ಪು

author img

By ETV Bharat Karnataka Team

Published : Feb 15, 2024, 6:34 AM IST

ಎಲೆಕ್ಟೋರಲ್​ ಬಾಂಡ್​ಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ.

SC to pronounce verdict on pleas challenging validity of Centre's Electoral Bonds scheme today
ಎಲೆಕ್ಟೋರಲ್​ ಬಾಂಡ್ಸ್​​​​ ಸ್ಕೀಂ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ತೀರ್ಪು ಇಂದು

ನವದೆಹಲಿ: ರಾಜಕೀಯ ಪಕ್ಷಗಳು ಅನಾಮಧೇಯ ಮೂಲಗಳಿಂದ ನಿಧಿ ಸಂಗ್ರಹಿಸಲು ಅವಕಾಶ ಕಲ್ಪಿಸುವ ಎಲೆಕ್ಟೋರಲ್​ ಬಾಂಡ್​ಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು​​ ಪ್ರಕಟಿಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಕಳೆದ ವರ್ಷದ ನವೆಂಬರ್ 2 ರಂದು ಈ ವಿಷಯದಲ್ಲಿ ಎಲ್ಲ ಅರ್ಜಿಗಳ ವಿಚಾರಣೆ ನಡೆಸಿ, ವಾದ - ಪ್ರತಿವಾದಗಳನ್ನು ಆಲಿಸಿ ಅಂತಿಮವಾಗಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಜನವರಿ 2, 2018 ರಂದು ಸರ್ಕಾರವು ಅಧಿಸೂಚನೆ ಹೊರಡಿಸಿದ ಈ ಯೋಜನೆಯು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆ ತರುವ ಪ್ರಯತ್ನಗಳ ಭಾಗವಾಗಿ ಜಾರಿಗೆ ಬಂದಿತ್ತು. ರಾಜಕೀಯ ಪಕ್ಷಗಳಿಗೆ ನೀಡಿದ ನಗದು ದೇಣಿಗೆಯ ಮೂಲವನ್ನು ಬಹಿರಂಗ ಮಾಡುವಂತಿಲ್ಲ ಎಂಬ ನಿಯಮದೊಂದಿಗೆ ಈ ಯೋಜನೆ ಜಾರಿಗೆ ತರಲಾಗಿತ್ತು. ಯೋಜನೆಯ ನಿಬಂಧನೆಗಳ ಪ್ರಕಾರ, ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 29A ಅಡಿ ನೋಂದಾಯಿಸಲಾದ ರಾಜಕೀಯ ಪಕ್ಷಗಳು ಮಾತ್ರ ಲೋಕಸಭೆ ಅಥವಾ ರಾಜ್ಯ ಶಾಸಕಾಂಗಗಳಿಗೆ ಶೇಕಡಾ 1 ಕ್ಕಿಂತ ಕಡಿಮೆಯಿಲ್ಲದಂತೆ ಕಳೆದ ಚುನಾವಣೆಯಲ್ಲಿ ಪಡೆದ ಮತಗಳ ಆಧಾರದ ಮೇಲೆ, ಅಂತಹ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ಅರ್ಹವಾಗಿವೆ.

ಎಲೆಕ್ಟೋರಲ್ ಬಾಂಡ್ ಎನ್ನುವುದು ಪ್ರಾಮಿಸರಿ ನೋಟ್ ಅಥವಾ ಬೇರರ್ ಬಾಂಡ್‌ನ ಸ್ವರೂಪದಲ್ಲಿರುವ ಒಂದು ಸಾಧನವಾಗಿದೆ. ವ್ಯಕ್ತಿ ಭಾರತದ ಪ್ರಜೆಯಾಗಿದ್ದರೆ ಅಥವಾ ಭಾರತದಲ್ಲಿ ಸಂಘಟಿತವಾಗಿ ಸ್ಥಾಪಿಸಲ್ಪಟ್ಟಿದ್ದರೆ ಅದನ್ನು ಯಾವುದೇ ವ್ಯಕ್ತಿ, ಕಂಪನಿ, ಸಂಸ್ಥೆ ಅಥವಾ ವ್ಯಕ್ತಿಗಳಿಂದ ರಚಿತವಾದ ಸಂಘಗಳಿಂದ ಬಾಂಡ್​ಗಳನ್ನು ಖರೀದಿಸಬಹುದು. ಈ ಬಾಂಡ್‌ಗಳು ನಿರ್ದಿಷ್ಟ ರಾಜಕೀಯ ಪಕ್ಷಗಳಿಗೆ ನಿಧಿ ಸಂಗ್ರಹದ ಉದ್ದೇಶಕ್ಕಾಗಿ ನೀಡಲಾಗುತ್ತದೆ. ಚುನಾವಣಾ ಬಾಂಡ್‌ಗಳ ಯೋಜನೆಯು ರಾಜಕೀಯ ನಿಧಿಯ "ಸಂಪೂರ್ಣ ಪಾರದರ್ಶಕ" ವಿಧಾನವಾಗಿದೆ ಮತ್ತು ಕಪ್ಪು ಹಣ ಅಥವಾ ಲೆಕ್ಕವಿಲ್ಲದ ಹಣವನ್ನು ಪಡೆಯುವುದು ಅಸಾಧ್ಯ ಎಂದು ಕೇಂದ್ರವು ಸುಪ್ರೀಂಕೋರ್ಟ್​ಗೆ ಸಲ್ಲಿಕೆ ಮಾಡಿರುವ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದೆ.

ಹಣಕಾಸು ಕಾಯಿದೆ 2017 ಮತ್ತು ಹಣಕಾಸು ಕಾಯಿದೆ 2016 ರ ಮೂಲಕ ರಾಜಕೀಯ ಪಕ್ಷಗಳು ಅನಿಯಮಿತ ದೇಣಿಗೆ ಸಂಗ್ರಹಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಈ ಕಾರಣಕ್ಕಾಗಿ ವಿವಿಧ ಕಾನೂನುಗಳಿಗೆ ಮಾಡಿದ ತಿದ್ದುಪಡಿಗಳನ್ನು ಪ್ರಶ್ನಿಸಿ ನಾನಾ ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಆಗಿದ್ದವು.

ಇದನ್ನು ಓದಿ: ರಸ್ತೆ ತಡೆ ಪ್ರಕರಣ: ಕ್ರಿಮಿನಲ್​ ಪ್ರಕ್ರಿಯೆ ರದ್ದತಿ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.