ETV Bharat / bharat

ದೆಹಲಿ ಸೇರಿ ಉತ್ತರ ಭಾರತದಲ್ಲಿ ಗುಡುಗು ಸಹಿತ ಮಳೆ: ದಕ್ಷಿಣ ಭಾರತದಲ್ಲಿ ಮುಂದಿನ 3 ದಿನ ಒಣಹವೆ - Meteorological Department

author img

By ETV Bharat Karnataka Team

Published : Apr 15, 2024, 1:05 PM IST

ದೆಹಲಿ, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಮುಂದಿನ 5 ದಿನಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ (IMD) ತಿಳಿಸಿದೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಸೋಮವಾರ ಅಲ್ಲಲ್ಲಿ ತುಂತುರು ಮಳೆ, ಗುಡುಗು ಸಹಿತ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಸೋಮವಾರ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಮಂಗಳವಾರದಿಂದ ಗುರುವಾರದವರೆಗೆ ಭಾರಿ ಪ್ರಮಾಣದ ಮಳೆಯ ಮುನ್ಸೂಚನೆ ಇಲ್ಲವಾದರೂ, ಭಾರಿ ಗಾಳಿಯೊಂದಿಗೆ ಆಕಾಶವು ಭಾಗಶಃ ಮೋಡ ಕವಿದ ವಾತಾವರಣದಿಂದ ಕೂಡಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರದಂದು ದೆಹಲಿಯ ಗರಿಷ್ಠ ತಾಪಮಾನವು 32.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಏಪ್ರಿಲ್ 11 ರಂದು ದಾಖಲಾದ 39.1 ಡಿಗ್ರಿ ಸೆಲ್ಸಿಯಸ್‌ಗೆ ಹೋಲಿಸಿದರೆ 7 ಡಿಗ್ರಿ ಸೆಲ್ಸಿಯಸ್‌ ಕುಸಿತ ಕಂಡಿದೆ. ಶನಿವಾರ ಮತ್ತು ಭಾನುವಾರ ಅಲ್ಲಲ್ಲಿ ಮಳೆಯಾದ ಪರಿಣಾಮ ಮಾಲಿನ್ಯ ಪ್ರಮಾಣ ಕೂಡ ತಗ್ಗಿದೆ. ಇಂದು ಜೋರಾದ ಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಗಾಳಿಯಲ್ಲಿನ ಆರ್ದ್ರತೆಯ ಮಟ್ಟವು 66 ಪ್ರತಿಶತದವರೆಗೆ ಮತ್ತು ಪ್ರತಿ ಗಂಟೆಗೆ 10 ರಿಂದ 15 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇದಕ್ಕಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ತನ್ನ ಬೆಳಗಿನ ಬುಲೆಟಿನ್‌ನಲ್ಲಿ ಈಶಾನ್ಯ ರಾಜಸ್ಥಾನದ ಮೇಲೆ ಚಂಡಮಾರುತದ ಪರಿಚಲನೆ ಇರುವುದಾಗಿ ಹೇಳಿರುವ ಹವಾಮಾನ ಇಲಾಖೆ, ದಕ್ಷಿಣ ಬಿಹಾರ, ಉತ್ತರ ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ದಕ್ಷಿಣ ಭಾಗದ ಮೂಲಕ ಗಂಗಾನದಿಯ ಪಶ್ಚಿಮ ಬಂಗಾಳದ ಕಡೆಗೆ ತೆರಳುವ ಸಾಧ್ಯತೆ ಇದೆ. ಪರಿಣಾಮ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 18 ರಿಂದ ವಾಯವ್ಯ ಭಾರತದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಈ ನಡುವೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಕಾಶ್ಮೀರ, ಮುಜಫರಾಬಾದ್, ಲಡಾಖ್, ಬಾಲ್ಟಿಸ್ತಾನ್ ಮತ್ತು ಗಿಲ್ಗಿಟ್‌ ಸೇರಿದಂತೆ ಇತರ ಭಾಗಗಳಲ್ಲಿ ಮಿಂಚು, ಗುಡುಗು ಮತ್ತು ಬಿರುಗಾಳಿ ಸಹಿತ ವ್ಯಾಪಕವಾದ ಮಳೆ/ಹಿಮಪಾತವು ಸಂಭವಿಸಬಹದು ಎಂದು ಇಲಾಖೆ ಮಾಹಿತಿ ನೀಡಿದೆ.

ತಾಪಮಾನ: ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ಬೆಳಗ್ಗೆ 7:30 ರವರೆಗೆ, ದೆಹಲಿಯ ತಾಪಮಾನವು 26 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದ್ದರೆ, ಫರಿದಾಬಾದ್‌ನಲ್ಲಿ 26 ಡಿಗ್ರಿ, ಗುರುಗ್ರಾಮ್‌ನಲ್ಲಿ 26 ಡಿಗ್ರಿ, ಗಾಜಿಯಾಬಾದ್‌ನಲ್ಲಿ 26 ಡಿಗ್ರಿ, ಗ್ರೇಟರ್ ನೋಯ್ಡಾದಲ್ಲಿ 25 ಡಿಗ್ರಿ, ನೋಯ್ಡಾದಲ್ಲಿ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದೇ ವಾತಾವರಣ ಏಪ್ರಿಲ್ 20ರ ವರೆಗೂ ಮಂದುವರೆಯುವ ಸಾಧ್ಯತೆ ಇದೆ.

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ವಾಯವ್ಯ ಭಾರತದಲ್ಲಿ ಬಿಸಿಲಿನ ತಾಪಮಾನ ಎದುರಾಗಬಹುದು. ಗರಿಷ್ಠ ತಾಪಮಾನದಲ್ಲಿ 2-4 C ಕ್ರಮೇಣ ಏರಿಕೆಯಾಗಬಹುದು. ಮಧ್ಯ ಭಾರತದಲ್ಲಿ ಗರಿಷ್ಠ 4-6 C ಏರಿಕೆ ಕಾಣಬಹುದು. ಆ ಬಳಿಕ ಯಾವುದೇ ಗಮನಾರ್ಹ ಬದಲಾವಣೆಗಳಿರುವುದಿಲ್ಲ. ಗುಜರಾತ್‌ ಹೊರತು ಸೋಮವಾರದಂದು ಗೋವಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಯಾನಂ, ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಇದು ಏಪ್ರಿಲ್ 18ರ ವರೆಗೂ ಮುಂದುವರೆಯಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ ನಿಲ್ಲದ ಏರಿಕೆ: ಬೆಂಗಳೂರು ಸೇರಿ ರಾಜ್ಯದ ಚಿನಿವಾರು ಪೇಟೆಯಲ್ಲಿ ದರ ಹೀಗಿದೆ! - gold and silver price

ETV Bharat Logo

Copyright © 2024 Ushodaya Enterprises Pvt. Ltd., All Rights Reserved.