ETV Bharat / bharat

ಫೆ.21ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಮುಂದುವರಿಸುತ್ತೇವೆ: ಕೇಂದ್ರ ಸಚಿವರ ಭೇಟಿ ಬಳಿಕ ರೈತ ಮುಖಂಡರ ಹೇಳಿಕೆ

author img

By ETV Bharat Karnataka Team

Published : Feb 19, 2024, 7:00 AM IST

''ನಾವು ಫೆ.21ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಮುಂದುವರಿಸುತ್ತೇವೆ'' ಎಂದು ಕೇಂದ್ರ ಸಚಿವರ ಭೇಟಿ ಬಳಿಕ ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

Delhi Chalo  ದೆಹಲಿ ಚಲೋ  ಪ್ರತಿಭಟನಾ ಮೆರವಣಿಗೆ  ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ  farmers Protest
ನಾವು ಫೆ.21ರಂದು ‘ದೆಹಲಿ ಚಲೋ’ ಮೆರವಣಿಗೆಯನ್ನು ಮುಂದುವರಿಸುತ್ತೇವೆ: ಕೇಂದ್ರ ಸಚಿವರ ಭೇಟಿ ಬಳಿಕ ರೈತ ಮುಖಂಡ ಹೇಳಿಕೆ

ಚಂಡೀಗಢ (ಪಂಜಾಬ್): ನಾಲ್ಕನೇ ಸುತ್ತಿನ ಮಾತುಕತೆಯ ನಂತರ, ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಣ್ ಸಿಂಗ್ ಪಂಧೇರ್ ಪ್ರತಿಕ್ರಿಯೆ ನೀಡಿದ್ದಾರೆ. ರೈತರಿಂದ ಫೆಬ್ರವರಿ 21 ರಂದು 'ದೆಹಲಿ ಚಲೋ' ಮೆರವಣಿಗೆಯೊಂದಿಗೆ ಮುಂದುವರಿಯಲಿದೆ. ಜೊತೆಗೆ ಎಂಎಸ್‌ಪಿ ಕುರಿತು ಸರ್ಕಾರ ಪ್ರಸ್ತಾಪಿಸಿರುವ ಪ್ರಸ್ತಾವನೆ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

''ಸರ್ಕಾರದ ಪ್ರಸ್ತಾವನೆ ಕುರಿತು ಇನ್ನೆರಡು ದಿನಗಳಲ್ಲಿ ಚರ್ಚೆ ನಡೆಸುತ್ತೇವೆ. ಇತರ ಬೇಡಿಕೆಗಳ ಬಗ್ಗೆಯೂ ಸರ್ಕಾರ ಚರ್ಚೆ ನಡೆಸಲಿದೆ. ಫಲಿತಾಂಶ ಬಾರದಿದ್ದಲ್ಲಿ ಫೆ.21ರಂದು ‘ದೆಹಲಿ ಚಲೋ’ ಮೆರವಣಿಗೆಯನ್ನು ಮುಂದುವರಿಸುತ್ತೇವೆ'' ಎಂದು ಚಂಡೀಗಢದಲ್ಲಿ ಸೋಮವಾರ ಪ್ರತಿಭಟನಾ ನಿರತ ರೈತ ಸಂಘಗಳು ಮತ್ತು ಕೇಂದ್ರ ಸಚಿವರ ನಡುವಿನ ಸಭೆಯ ಮುಕ್ತಾಯದ ನಂತರ ಸುದ್ದಿಗಾರರೊಂದಿಗೆ ಪಂಧೇರ್ ಮಾತನಾಡಿದರು.

''ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮತ್ತು ರೈತ ಸಂಘಗಳು ಪ್ರಯತ್ನಿಸಲಿವೆ. ನಾವು ಸರ್ಕಾರದ ಪ್ರಸ್ತಾವನೆಯ ಬಗ್ಗೆ ಚರ್ಚೆ ನಡೆಸುತ್ತೇವೆ. ಅದರ ಬಗ್ಗೆ ಅಭಿಪ್ರಾಯಗಳನ್ನು ತೆಗೆದುಕೊಳ್ಳುತ್ತೇವೆ. ಇಂದು ಬೆಳಗ್ಗೆ ಅಥವಾ ಸಂಜೆಯೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ದೆಹಲಿಗೆ ಮರಳಿದ ನಂತರ ಇತರೆ ಬೇಡಿಕೆಗಳ ಕುರಿತು ಚರ್ಚೆ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ. ಫೆ.19-20ರಂದು ಚರ್ಚೆ ನಡೆಯಲಿದ್ದು, ಫೆ.21ಕ್ಕೆ ನಿಗದಿಯಾಗಿರುವ ‘ದೆಹಲಿ ಚಲೋ’ ಮೆರವಣಿಗೆ ನಡೆಯಲಿದೆ. ಚರ್ಚೆಗಳ ಆಧಾರದ ಮೇಲೆ ಸರ್ಕಾರ ಮತ್ತು ರೈತ ಸಂಘ ಒಟ್ಟಾಗಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ'' ಎಂದರು.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಪ್ರತಿಕ್ರಿಯೆ: ''ಸರ್ಕಾರವು ನಮಗೆ ಪ್ರಸ್ತಾವನೆಯನ್ನು ನೀಡಿದೆ, ಅದನ್ನು ಎರಡು ಸರ್ಕಾರಿ ಏಜೆನ್ಸಿಗಳು ಮೇಲ್ವಿಚಾರಣೆ ಮಾಡುತ್ತವೆ ಎಂದು ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಹೇಳಿದರು. "ನಾವು ನಮ್ಮ ವೇದಿಕೆಗಳು ಮತ್ತು ತಜ್ಞರೊಂದಿಗೆ ಸರ್ಕಾರದ (ಎಂಎಸ್‌ಪಿ) ಪ್ರಸ್ತಾವನೆಯನ್ನು ಚರ್ಚಿಸುತ್ತೇವೆ. ನಂತರ, ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ. ಬೇಡಿಕೆಗಳು ಈಡೇರುವವರೆಗೂ ನಮ್ಮ ಪ್ರತಿಭಟನಾ ಮೆರವಣಿಗೆ (ದೆಹಲಿ ಚಲೋ) ಮುಂದುವರಿಯುತ್ತದೆ. ಇನ್ನೂ ಹಲವು ಬೇಡಿಕೆಗಳ ಕುರಿತು ಮಾತುಕತೆ ನಡೆಸಬೇಕಿದೆ. ಸರ್ಕಾರದೊಂದಿಗಿನ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ನಾವು ನಮ್ಮ (ರೈತರ) ಬೇಡಿಕೆಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದೇವೆ'' ಎಂದು ದಲ್ಲೆವಾಲ್ ತಿಳಿಸಿದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿಕೆ: ಇದಕ್ಕೂ ಮುನ್ನ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ರೈತರ ಪ್ರತಿನಿಧಿಗಳೊಂದಿಗೆ ಸಕಾರಾತ್ಮಕ ಮತ್ತು ವ್ಯಾಪಕವಾದ ಚರ್ಚೆ ನಡೆಸಿದ್ದೇವೆ. ನಾಳೆಯೊಳಗೆ ರೈತ ಮುಖಂಡರು ಸರ್ಕಾರದ ಪ್ರಸ್ತಾವನೆಗಳ ಬಗ್ಗೆ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಹೇಳಿದ್ದರು.

''ಎನ್‌ಸಿಸಿಎಫ್ (ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ) ಮತ್ತು ಎನ್‌ಎಎಫ್‌ಇಡಿ (ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ) ನಂತಹ ಸರ್ಕಾರದಿಂದ ಉತ್ತೇಜಿತವಾಗಿರುವ ಸಹಕಾರ ಸಂಘಗಳು ಮುಂದಿನ 5 ವರ್ಷಗಳವರೆಗೆ ಒಪ್ಪಂದವನ್ನು ರೂಪಿಸುತ್ತವೆ. ಮತ್ತು ರೈತರಿಂದ MSP ಮೇಲೆ ಉತ್ಪನ್ನಗಳನ್ನು ಖರೀದಿಸುತ್ತವೆ. ಪ್ರಮಾಣದಲ್ಲಿ ಯಾವುದೇ ಮಿತಿಯಿಲ್ಲ" ಎಂದು ಅವರು ತಿಳಿಸಿದ್ದರು.

ಪಂಜಾಬ್‌ನ ಧರಣಿ ನಿರತ ರೈತರು, ಎಂಎಸ್‌ಪಿ ಮತ್ತು ಸಾಲ ಮನ್ನಾ ಮಾಡಲು ಕಾನೂನು ಖಾತ್ರಿಪಡಿಸುವ ಸುಗ್ರೀವಾಜ್ಞೆ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಪಂಜಾಬ್ - ಹರಿಯಾಣ ಗಡಿಯ ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲಿ ಸಾವಿರಾರು ರೈತರು ಬೀಡುಬಿಟ್ಟಿದ್ದಾರೆ. ರಾಜಕೀಯೇತರ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ 'ದೆಹಲಿ ಚಲೋ' ಕರೆ ನೀಡಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿವೆ.

ಇದನ್ನೂ ಓದಿ: ಟೆಂಪೋ ಟ್ರಾವೆಲರ್​ಗೆ ಸಿಮೆಂಟ್ ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ: ನಾಲ್ವರು ಯುವಕರು ಸಾವು, 10 ಜನರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.