ETV Bharat / entertainment

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ನಟಿ ಶ್ರುತಿ - Actress Shruti

ಚಂದನವನದ ಜನಪ್ರಿಯ ಮತ್ತು ಹಿರಿಯ ನಟಿ ಶ್ರುತಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದ್ದಾರೆ.

Veerendra Heggade and Shruti
ಹಿರಿಯ ನಟಿ ಶ್ರುತಿ ಅವರು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟುತ್ತಿರುವುದು. (ETV Bharat)
author img

By ETV Bharat Karnataka Team

Published : August 20, 2024 at 5:23 PM IST

|

Updated : August 20, 2024 at 5:42 PM IST

2 Min Read
Choose ETV Bharat

ರಕ್ಷಾಬಂಧನ ಅನೇಕರ ಬಾಳಲ್ಲಿ ಪ್ರಮುಖ ಹಬ್ಬ. ಬಹುತೇಕರು ತಮ್ಮದೇ ಆದ ರೀತಿಯಲ್ಲಿ ಈ ಹಬ್ಬವನ್ನು ಬಹಳ ವಿಶೇಷವಾಗಿ ಆಚರಿಸುತ್ತಾರೆ. ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲ್ಪಡುವ ರಕ್ಷಾಬಂಧನಕ್ಕೆ ಭಾರತದಲ್ಲಿ ವಿಶೇಷ ಮಾನ್ಯತೆ ಇದೆ. ಸಹೋದರಿಯರು ತಮ್ಮ ಅಣ್ಣ-ತಮ್ಮಂದಿರಿಗೆ ರಾಖಿ ಕಟ್ಟುವ ಮೂಲಕ ತಮ್ಮ ನಡುವಿನ ಪ್ರೀತಿ, ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಾರೆ. ಜೊತೆಗೆ, ಪರಸ್ಪರ ಶುಭ ಹಾರೈಸಿಕೊಳ್ಳುತ್ತಾರೆ.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿದ ನಟಿ ಶ್ರುತಿ
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ನಟಿ ಶ್ರುತಿ ಹಾಗು ಅವರ ಪುತ್ರಿ (ETV Bharat)

ಮಂಗಳವಾರ ಹೆಚ್ಚಿನವರು ಈ ಹಬ್ಬವನ್ನು ಆಚರಿಸಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳೂ ಸಹ ಇದರಿಂದ ಹೊರತಲ್ಲ. ಸ್ಯಾಂಡಲ್​ವುಡ್​ನ ಅನೇಕ ತಾರೆಯರು ತಮ್ಮ ಅಧಿಕೃತ ಸೋಷಿಯಲ್​ ಮೀಡಿಯಾಗಳಲ್ಲಿ ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಗಮನ ಸೆಳೆದರು.

ಇದೀಗ ಹಿರಿಯ ನಟಿ ಶ್ರುತಿ ಕರುನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟಿ ಹಬ್ಬಾಚರಿಸಿದ್ದಾರೆ. ಶೃತಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಈ ಕುರಿತ ಸರಣಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

'ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ರಕ್ಷಾ ಬಂಧನದ ದಿನ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮಲ್ಲರಿಗೂ ಒಳ್ಳೆಯದನ್ನು ಮಾಡಲಿ' ಎಂದು ಬರೆದುಕೊಂಡಿದ್ದಾರೆ.

ನಟಿ ಹಂಚಿಕೊಂಡಿರುವ ಫೋಟೋಗಳು ವೈರಲ್​ ಆಗುತ್ತಿದ್ದು ನೆಟ್ಟಿಗರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟಿಯ ಪೋಸ್ಟ್​​ಗೆ ಪ್ರತಿಕ್ರಿಯಿಸಿದ ಸಾಮಾಜಿಕ ಜಾಲತಾಣ ಬಳಕೆದಾರರೋರ್ವರು, 'ಅದೃಷ್ಟವಂತರು ನೀವೇ ಮೇಡಂ' ಎಂದು ತಿಳಿಸಿದ್ದಾರೆ. ಮತ್ತೋರ್ವರು ಪ್ರತಿಕ್ರಿಯಿಸಿ, 'ಶ್ರುತಿ ಮೇಡಂ. ನಿಮ್ಮನ್ನು ನೋಡಿ ಬಹಳ ಸಂತೋಷವಾಗಿದೆ. ಪೂಜ್ಯರಿಂದ ಆಶೀರ್ವಾದ ಪಡೆಯುತ್ತಿರುವುದನ್ನು ಕಂಡು ಖುಷಿಯಾಯಿತು. ನಿಮ್ಮ ಮಗಳು ಯಾವಾಗ ಸಿನಿಮಾ ಪ್ರವೇಶಿಸಲಿದ್ದಾರೆ? ಅವರು ಬಹಳ ಸುಂದರವಾಗಿ ಕಾಣುತ್ತಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಶ್ರುತಿ ಅವರ ಪರಂಪರೆ ಮುಂದುವರಿಯಬೇಕು' ಎಂದು ಬರೆದಿದ್ದಾರೆ. 'ನಿಮಗೆ ಉತ್ತಮ ಅವಕಾಶ ಸಿಕ್ಕಿದೆಯೆಂದು ನನಗನಿಸುತ್ತಿದೆ' ಎಂದು ಮತ್ತೋರ್ವ ನೆಟ್ಟಿಗ ಪ್ರತಿಕ್ರಿಯಿಸಿದ್ದಾರೆ.

ಶ್ರುತಿ ಅವರಲ್ಲದೇ ಚಂದನವನದ ಕೆಲವು ಗಣ್ಯರು ರಕ್ಷಾಬಂಧನ ಪೋಸ್ಟ್ ಶೇರ್ ಮಾಡಿದ್ದಾರೆ.

ಡಿವೈನ್​ ಸ್ಟಾರ್ ಖ್ಯಾತಿಯ ರಿಷಬ್​ ಶೆಟ್ಟಿ ತಮ್ಮ ಮುದ್ದು ಮಕ್ಕಳ ರಕ್ಷಾಬಂಧನ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದು, 'ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು' ಎಂದು ಬರೆದುಕೊಂಡಿದ್ದಾರೆ. ರಾದ್ಯ ಮತ್ತು ರನ್ವಿತ್​​ ಫೋಟೋಗಳು ಬಹಳ ಮುದ್ದಾಗಿವೆ. ಮುದ್ದು ತಂಗಿ ಅಣ್ಣನ ಕಾಲಿಗೆ ನಮಸ್ಕರಿಸುತ್ತಿರುವ ಫೋಟೋ, ಅಣ್ಣ ತಂಗಿಗೆ ಕಾಲ್ಗೆಜ್ಜೆ ತೊಡಿಸುತ್ತಿರುವ ಕ್ಷಣ ಬಹಳ ಆಕರ್ಷಕವಾಗಿದೆ.

ಇದನ್ನೂ ಓದಿ: 'ನಟಿಯರಿಗೆ ಶಿಕ್ಷೆ': ಮಲಯಾಳಂ ಚಿತ್ರರಂಗದ ಕರಾಳ ಮುಖವನ್ನು ಬಯಲಿಗೆಳೆದ ಹೇಮಾ ಸಮಿತಿ ವರದಿ - Hema Committee Report

ಸೋಮವಾರ ಸಂಜೆ ನಟಿ ರಾಧಿಕಾ ಪಂಡಿತ್​​ ತಮ್ಮ ಮಕ್ಕಳ ರಕ್ಷಾಬಂಧನದ ಫೋಟೋಗಳನ್ನು ಹಂಚಿಕೊಂಡಿದ್ದರು. ಮುದ್ದಾದ ಫೋಟೋಗಳಿಗೆ, 'ನಮ್ಮ ರಕ್ಷಾಬಂಧನ ಸೆಲೆಬ್ರೆಶನ್​​​ನ ಕ್ಷಣಗಳಿವು. ನೀವೆಲ್ಲರೂ ನಿಮ್ಮ ಪ್ರೀತಿಪಾತ್ರರೊಂದಿಗೆ ಹಬ್ಬಾಚರಿಸಿದ್ದೀರಿ ಎಂದು ಭಾವಿಸುತ್ತೇವೆ' ಎಂದು ಬರೆದುಕೊಂಡಿದ್ದಾರೆ. ಇಂದು ಸಹೋದರನೊಂದಿಗಿನ ಫೋಟೋ ಹಂಚಿಕೊಂಡು ವಿಶ್​ ಮಾಡಿದ್ದಾರೆ.

ಇದನ್ನೂ ಓದಿ: ಗಣಿ ಅಭಿನಯದ 'ಕೃಷ್ಣಂ ಪ್ರಣಯ ಸಖಿ' 5 ದಿನದಲ್ಲಿ ಗಳಿಸಿದ್ದೆಷ್ಟು? - Krishnam Pranaya Sakhi Collection

ನಟ ಡಾಲಿ ಧನಂಜಯ್​ ಕೂಡಾ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸರಣಿ ಫೋಟೋಗಳನ್ನು ಹಂಚಿಕೊಂಡಿದ್ದು, 'ಅಕ್ಕ ತಂಗಿಯರ ರಕ್ಷೆ. ರಕ್ಷಾ ಬಂಧನದ ಶುಭಾಶಯಗಳು' ಎಂದು ಬರೆದುಕೊಂಡಿದ್ದಾರೆ. ಹೀಗೆ ಹಲವರು ಹಬ್ಬಾಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Last Updated : August 20, 2024 at 5:42 PM IST