ETV Bharat / entertainment

'ಆರ್ಯನ್ ಖಾನ್ ಡ್ರಗ್ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ'- ವಾಂಖೆಡೆ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದ ಇಡಿ

author img

By PTI

Published : Feb 10, 2024, 1:23 PM IST

Ex NCB officer Sameer Wankhede  money laundering case  Aryan Khan drugs case  ಆರ್ಯನ್ ಖಾನ್ ಡ್ರಗ್ ಪ್ರಕರಣ  ಮನಿ ಲಾಂಡರಿಂಗ್ ಪ್ರಕರಣ
ವಾಂಖೆಡೆ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದ ಇಡಿ

Sameer Wankhede ED Case: ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಡ್ರಗ್ ಪ್ರಕರಣದಲ್ಲಿ ಎನ್‌ಸಿಬಿ ಮುಂಬೈ ವಿಭಾಗದ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಮುಂಬೈ, ಮಹಾರಾಷ್ಟ್ರ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ. ಸಮೀರ್ ವಾಂಖೆಡೆ ಅವರನ್ನು ಡ್ರಗ್ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡುವುದನ್ನು ತಪ್ಪಿಸಲು ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಲಂಚವಾಗಿ ಕೇಳಿದ್ದಾರೆ ಎಂಬ ಆರೋಪವಿದೆ. ಈ ಆರೋಪದ ಮೇಲೆ ಸಿಬಿಐ ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ವಾಂಖೆಡೆ ವಿರುದ್ಧ ಎಫ್‌ಐಆರ್ ಕೂಡ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ಬಹಿರಂಗಪಡಿಸಿವೆ. ಹಲವು ಮಾಜಿ ಎನ್‌ಸಿಬಿ ಅಧಿಕಾರಿಗಳಿಗೆ ಇಡಿ ಸಮನ್ಸ್ ಕೂಡ ಜಾರಿ ಮಾಡಿದೆ.

ವಾಂಖೆಡೆ ವಿರುದ್ಧ ಪ್ರಕರಣ ದಾಖಲು: ಸಿಬಿಐ ನಂತರ ಈಗ ಇಡಿ ಮುಂಬೈ ಎನ್‌ಸಿಬಿ ವಲಯದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ. ಇಡಿ ಮೂವರು ಎನ್‌ಸಿಬಿ ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದೆ. ವಾಂಖೆಡೆ ಮತ್ತು ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಎನ್‌ಸಿಬಿ ನಡೆಸಿದ ವಿಜಿಲೆನ್ಸ್ ತನಿಖೆಯಲ್ಲಿ ಕಾರ್ಡೆಲಿಯಾ ಕ್ರೂಸ್ ಪ್ರಕರಣದಲ್ಲಿ ಅವರ ಪುತ್ರ ಆರ್ಯನ್ ಖಾನ್ ಬಿಡುಗಡೆಗಾಗಿ ನಟ ಶಾರುಖ್ ಖಾನ್ ಅವರಿಂದ ಲಂಚಕ್ಕೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಸಮೀರ್ ವಾಂಖೆಡೆ ಅವರ ಇತರ ಇಬ್ಬರು ಅಧಿಕಾರಿಗಳು, ಆಗಿನ ಸೂಪರಿಂಟೆಂಡೆಂಟ್ ವಿವಿ ಸಿಂಗ್ ಮತ್ತು ಗುಪ್ತಚರ ಅಧಿಕಾರಿ ಆಶಿಶ್ ರಂಜನ್ ಪ್ರಸಾದ್ ಅವರಿಗೆ ಇಡಿ ಸಮನ್ಸ್ ನೀಡಿದೆ.

ಹೈಕೋರ್ಟ್​ ಮೆಟ್ಟಿಲೇರಿದ ವಾಂಖೆಡೆ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೆಲವು ಎನ್‌ಸಿಬಿ ಅಧಿಕಾರಿಗಳಿಗೆ ಇಡಿ ಸಮನ್ಸ್ ನೀಡಿದ ನಂತರ ವಾಂಖೆಡೆ ಈ ವಾರದ ಆರಂಭದಲ್ಲಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಡಿ ಇಸಿಐಆರ್ ರದ್ದುಪಡಿಸಿ ಯಾವುದೇ ದಂಡನಾ ಕ್ರಮ ಕೈಗೊಳ್ಳದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಸಿಬಿಐ ಪ್ರಕರಣದಲ್ಲೂ ಅವರು ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಿದ್ದರು. ಆಗ ಪ್ರಕರಣದಲ್ಲಿ ಸಮೀರ್ ವಾಂಖೆಡೆಗೆ ಹೈಕೋರ್ಟ್ ರಕ್ಷಣೆ ನೀಡಿದ್ದು, ಗಮನಾರ್ಹ.

'ನ್ಯಾಯ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆ': ಮತ್ತೊಂದೆಡೆ ಸಮೀರ್ ವಾಂಖೆಡೆ ತಮ್ಮ ವಿರುದ್ಧ ಇಡಿ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಂಗದ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಎಂದರು. "ಸಿಬಿಐ ನೀಡಿದ ವಿವರಗಳ ಆಧಾರದ ಮೇಲೆ ಇಡಿ ನನ್ನ ವಿರುದ್ಧ ಪ್ರಕರಣವನ್ನು ದಾಖಲಿಸಿದೆ. ಇದು ನನಗೆ ಆಶ್ಚರ್ಯವನ್ನುಂಟು ಮಾಡಿದೆ. ಇದು ಈಗಾಗಲೇ ಬಾಂಬೆ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಪ್ರಕರಣವು ಬಾಕಿ ಇರುವಾಗ ನಾನು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲು ಸಾಧ್ಯವಿಲ್ಲ. ನಾನು ಸೂಕ್ತ ಸಮಯದಲ್ಲಿ ನ್ಯಾಯಾಲಯಕ್ಕೆ ಸಾಕ್ಷ್ಯವನ್ನು ನೀಡುತ್ತೇನೆ" ಎಂದು ವಾಂಖೆಡೆ ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ: 2021 ರಲ್ಲಿ, ವಾಂಖೆಡೆ ಅವರು ಎನ್‌ಸಿಬಿ ಮುಂಬೈನ ವಲಯ ನಿರ್ದೇಶಕರಾಗಿದ್ದಾಗ ಆರ್ಯನ್ ಖಾನ್ ಅವರನ್ನು ಡ್ರಗ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣ ಅಂದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಆ ಪ್ರಕರಣದಲ್ಲಿ ಆರ್ಯನ್ ಖಾನ್​ಗೆ ಎನ್​ಸಿಬಿ ಕ್ಲೀನ್ ಚಿಟ್ ನೀಡಿತ್ತು. ಆ ಬಳಿಕ ವಾಂಖೆಡೆ ಅವರ ಮೇಲೆ ಹಲವು ಆರೋಪಗಳು ಬಂದಿದ್ದರಿಂದ ಅವರನ್ನು ವಲಯ ನಿರ್ದೇಶಕರ ಹುದ್ದೆಯಿಂದ ವರ್ಗಾವಣೆ ಮಾಡಿ ತನಿಖೆ ನಡೆಸಲಾಗಿತ್ತು. ಈ ವೇಳೆ ವಾಂಖೆಡೆ ಸೇರಿ ನಾಲ್ವರು ರೂ. 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿತ್ತು. ಇದರಿಂದ ಆಂತರಿಕ ತನಿಖೆ ನಡೆಸಿದ ಎನ್​ಸಿಬಿ ಸಿಬಿಐಗೆ ವಿವರ ನೀಡಿದೆ. ನಂತರ ಕೇಂದ್ರ ತನಿಖಾ ಸಂಸ್ಥೆ ವಾಂಖೆಡೆ ವಿರುದ್ಧ ಪ್ರಕರಣ ದಾಖಲಿಸಿತ್ತು. ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ತನಿಖಾ ಸಂಸ್ಥೆಗಳು ಹೇಳಿವೆ.

ಓದಿ: 'ಚಂದು ಚಾಂಪಿಯನ್'​​: ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿದ ಕಾರ್ತಿಕ್ ಆರ್ಯನ್ ಲುಕ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.