ಅಪ್ಪುಸ್ ಗಂಧದಗುಡಿ ಅಗರಬತ್ತಿ ಬಿಡುಗಡೆ: ಹೊಸ ಉದ್ಯಮ ಶುರುಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ - Gandhadagudi Agarbatti

author img

By ETV Bharat Karnataka Team

Published : Apr 24, 2024, 7:11 PM IST

Gandhadagudi Agarbatti launch on Dr Rajkumar's Birth Anniversary
'ಗಂಧದಗುಡಿ ಅಗರಬತ್ತಿ' ಪರಿಚಯಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ()

Gandhadagudi Agarbatti: ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಈ ಕುರಿತು ಅವರು ಸೋಷಿಯಲ್​ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ಇಂದು ರಾಜ್ಯಾದ್ಯಂತ ಕನ್ನಡದ ಮೇರುನಟ ಡಾ.ರಾಜ್​ಕುಮಾರ್ ಜನ್ಮದಿನದ ಸಂಭ್ರಮ ಕಳೆಗಟ್ಟಿತ್ತು. ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ. ಕನ್ನಡದ ಕಂಪನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಸರಸ್ವತಿ ಪುತ್ರ ಡಾ.ರಾಜ್​ಕುಮಾರ್ ಅವರ ಹುಟ್ಟಿದ ದಿನದಂದು ಪುನೀತ್ ರಾಜ್​ಕುಮಾರ್ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಈ ಕುರಿತು ಅಶ್ವಿನಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಒದಗಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಎಕ್ಸ್ ಪೋಸ್ಟ್: ''ಇಂದು ಅಪ್ಪಾಜಿಯವರ 95ನೇ ಜನ್ಮದಿನಾಚರಣೆಯ ಅಂಗವಾಗಿ ಹಾಗೂ ಗಂಧದಗುಡಿ ಚಿತ್ರದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದನ್ನು ಅಪ್ಪು ಅವರ ಗಂಧದಗುಡಿ ಅಗರಬತ್ತಿಯ ಶುಭಾರಂಭದೊಂದಿಗೆ ಸ್ಮರಿಸೋಣ'' ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಗಂಧದಗುಡಿ ಅಗರಬತ್ತಿ ಬಳಸಿ ಸಮಾಧಿಗೆ ಪೂಜೆ: ವಿಶೇಷ ಅಂದ್ರೆ, ಇಂದು ಕಂಠೀವರ ಸ್ಟುಡಿಯೋದಲ್ಲಿ ಡಾ.ರಾಜ್​ಕುಮಾರ್ ಸಮಾಧಿಗೆ ಅಪ್ಪು ಗಂಧದಗುಡಿ ಅಗರಬತ್ತಿ ಬಳಸಿ ಪೂಜೆ ಮಾಡುವ ಮೂಲಕ ಗಂಧದಗುಡಿ ಅಗರಬತ್ತಿ ಉದ್ಯಮಕ್ಕೆ ಚಾಲನೆ ನೀಡಲಾಯಿತು. ರಾಘವೇಂದ್ರ ರಾಜ್​ಕುಮಾರ್, ಪತ್ನಿ ಮಂಗಳಾ, ಅಶ್ವಿನಿ ಹಾಗೂ ಮಗಳು ವಂದಿತಾ ಸೇರಿದಂತೆ ಕುಟುಂಬದ ಕೆಲ ಸದಸ್ಯರು ಈ ಅಗರಬತ್ತಿಯಿಂದ ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದರು.

ಹೊಸ ಪ್ರತಿಭೆಗಳಿಗೆ ಪಿಆರ್​ಕೆ ಪ್ರೋತ್ಸಾಹ: ಪುನೀತ್ ರಾಜ್​ಕುಮಾರ್ ಅಗಲಿಕೆ ಬಳಿಕ ಪಿಆರ್​ಕೆ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಅಶ್ವಿನಿ ನಿರ್ಮಾಪಕಿಯಾಗಿ ಹೊಸ ನಿರ್ದೇಶಕರು, ಯುವ ನಟ-ನಟಿಯರಿಗೆ ಅವಕಾಶ ನೀಡಿ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ.

ಇದನ್ನೂ ಓದಿ: ನಟಸಾರ್ವಭೌಮನ ಜನ್ಮದಿನ: ರಾಜ್​ ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ - Dr Rajkumar

ಇತ್ತೀಚಿಗೆ 'O2' ಎಂಬ ಹೆಸರಿನಲ್ಲಿ ಮೆಡಿಕಲ್ ಕುರಿತಾದ ಸಿನಿಮಾವನ್ನು ಪಿಆರ್​ಕೆ ಸಂಸ್ಥೆಯಡಿ ನಿರ್ಮಾಣ ಮಾಡಿ ಬಿಡುಗಡೆ ಮಾಡಲಾಗಿತ್ತು. ಹೃದಯ ಸ್ತಂಭನವಾಗಿ ಸಾವಿನಂಚಿಗೆ ತಲುಪಿದ ವ್ಯಕ್ತಿಯನ್ನು '02' ಡ್ರಗ್ ಮೂಲಕ ಬದುಕಿಸಬಹುದು. ಆ ಹೊಸ ಆವಿಷ್ಕಾರವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಚಿತ್ರದಲ್ಲಿ ಶ್ರದ್ಧಾ ಎಂಬ ಪಾತ್ರವನ್ನು ಆಶಿಕಾ ರಂಗನಾಥ್ ನಿರ್ವಹಿಸಿದ್ದಾರೆ. ಪ್ರಶಾಂತ್ ರಾಜ್ ಹಾಗೂ ರಾಘವ್ ನಾಯಕ್ ಚಿತ್ರ ಬರೆದು ನಿರ್ದೇಶಿಸಿದ್ದಾರೆ. ರಾಘವ್ ನಾಯಕ್ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರ ಸಿನಿಪ್ರಿಯರು ಹಾಗೂ ವಿಮರ್ಶಕರಿಂದ ಬಹುತೇಕ ಮೆಚ್ಚುಗೆ ಸ್ವೀಕರಿಸಿದೆ.

ಇದನ್ನೂ ಓದಿ: ಡಾ. ರಾಜ್ ಜನ್ಮದಿನ: ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೇ ಉಳಿದ ನಟಸಾರ್ವಭೌಮ - Dr Raj Birth Anniversary

ETV Bharat Logo

Copyright © 2024 Ushodaya Enterprises Pvt. Ltd., All Rights Reserved.