ಸ್ಯಾಂಡಲ್ವುಡ್ನಲ್ಲಿ 'ರತ್ನ' ಶೀರ್ಷಿಕೆಯ ಹೊಸ ಸಿನಿಮಾ ಬರ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕುರಿತ ಚಿತ್ರವಿದು. ನಿರ್ದೇಶಕ ಬಸವರಾಜ್ ಬಳ್ಳಾರಿ ನಿರ್ಮಿಸಿ ನಿರ್ದೇಶಿಸಿರುವ 'ರತ್ನ' ಟ್ರೇಲರ್ ಮಾರ್ಚ್ 17ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಹರ್ಷಲ ಹನಿ ಹಾಗೂ ನಟ ವರ್ಧನ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ನಾಯಕಿ ಪುನೀತ್ ರಾಜ್ಕುಮಾರ್ ಅವರ ಅಪ್ಪಟ ಅಭಿಮಾನಿ ಆಗಿರುತ್ತಾಳೆ. ಅಪ್ಪು ಅಭಿಮಾನಿಯ ಸುತ್ತ ಕಥೆ ಸುತ್ತುತ್ತದೆ.
ತಾರಾ ಬಳಗ: ಆನಂದ್ ಅಪ್ಪು, ಬಾಲರಾಜ್ ಒಡೆಯರ್, ನಾಗೇಂದ್ರ ಅರಸ್, ಅಮಿತ್ ರಾವ್, ಸಾರಿಕಮ್ಮ, ರಾಣಿ ಬಸವರಾಜ್, ಸುಚಿತ್ ಚೌವ್ಹಾಣ್, ರಾಮು ಕರೂರ್, ಮಂಜು ದೈವಜ್ಞ ಮುಂತಾದವರು ತಾರಾ ಬಳಗದಲ್ಲಿದ್ದಾರೆ.
ನಿರ್ದೇಶಕ ಬಸವರಾಜ್ ಬಳ್ಳಾರಿ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಹಾಡುಗಳ ರಚನೆ ಮಾಡಿದ್ದಾರೆ. ಸತೀಶ್ ಬಾಬು ಸಂಗೀತ ನಿರ್ದೇಶನ, ಸತೀಶ್ ಗಂಗಾವತಿ ಛಾಯಾಗ್ರಹಣ ಹಾಗೂ ನಾಗೇಂದ್ರ ಅರಸ್ ಸಂಕಲನವಿದೆ. ಮಂಜುನಾಥ್ ಎಂ ಮತ್ತು ರಾಘವೇಂದ್ರ ಕರೂರ್ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿಗೆ ರತ್ನ ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ, ಯು ಪ್ರಮಾಣಪತ್ರ ನೀಡಿದೆ. ಏಪ್ರಿಲ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.
ಜಾಕಿ ಚಿತ್ರ ಮತ್ತೆ ಬಿಡುಗಡೆ: ಮಾರ್ಚ್ 17ರಂದು ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಮತ್ತೊಂದು ಖುಷಿ ವಿಚಾರವಿದೆ. 'ಜಾಕಿ' ಮತ್ತೆ ಬಿಡುಗಡೆ ಆಗುತ್ತಿದೆ. ನಟಿ ಭಾವನಾ ಚಿತ್ರದಲ್ಲಿ ನಟಿಸಿದ್ದಾರೆ. ದುನಿಯಾ ಸಿನಿಮಾ ಖ್ಯಾತಿಯ ಸೂರಿ ನಿರ್ದೇಶನ ಜಾಕಿ ಸಿನಿಮಾಕ್ಕಿದೆ.
ಇದನ್ನೂ ಓದಿ: 'ಒಂದು ಸರಳ ಪ್ರೇಮಕಥೆ' ಸಕ್ಸಸ್: 25 ದಿನ ಪೂರೈಸಿದ ಸಂಭ್ರಮ