Health Benefits of Ashwagandha: ಭಾರತೀಯ ಆಯುರ್ವೇದ ವಿಜ್ಞಾನವು ಆರೋಗ್ಯದ ಹಲವು ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವುದಲ್ಲದೆ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ಹೇಳುತ್ತದೆ. ನಮಗೆ ವ್ಯಾಪಕವಾಗಿ ಲಭ್ಯವಿರುವ ವಸ್ತುಗಳಿಂದ ಹಿಡಿದು ವಿರಳವಾಗಿ ಲಭ್ಯವಿರುವ ವಸ್ತುಗಳ ಕುರಿತ ಪ್ರಯೋಜನಗಳನ್ನು ಆಯುರ್ವೇದದಲ್ಲಿ ತಿಳಿಸಲಾಗಿದೆ. ಆಯುರ್ವೇದದಲ್ಲಿ ಅಶ್ವಗಂಧಕ್ಕೆ ಅತ್ಯುನ್ನತ ಸ್ಥಾನವನ್ನು ನೀಡಲಾಗಿದೆ.
ಹಾಗಿದ್ದರೆ, ಏನಿದು ಅಶ್ವಗಂಧ? ಇದನ್ನು ಪ್ರತಿದಿನ ಸೇವಿಸಿದರೆ ಯಾವೆಲ್ಲಾ ಪ್ರಯೋಜನಗಳು ದೊರೆಯುತ್ತವೆ? ಎಂಬುದನ್ನು ಅರಿತುಕೊಳ್ಳೋಣ.
ಅಶ್ವಗಂಧ: ಅಶ್ವಗಂಧವನ್ನು 'ಗಿಡಮೂಲಿಕೆಗಳ ರಾಜ' ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆಯುರ್ವೇದ ಔಷಧದಲ್ಲಿ ಇದನ್ನು ಬಳಕೆ ಮಾಡಲಾಗುತ್ತಿದೆ. ಇಂಡಿಯನ್ ಜಿನ್ಸೆಂಗ್ ಎಂದೂ ಇದನ್ನು ಕರೆಯುತ್ತಾರೆ. ಅಶ್ವಗಂಧವು ಏಷ್ಯಾ ಮತ್ತು ಆಫ್ರಿಕಾದಲ್ಲಿ ಬೆಳೆಯುವ ನಿತ್ಯಹರಿದ್ವರ್ಣ ಪೊದೆಸಸ್ಯವಾಗಿದ್ದು, ವೈಜ್ಞಾನಿಕವಾಗಿ ವಿಥಾನಿಯಾ ಸೊಮಿಫೆರಾ ಎನ್ನುವರು.
ಒತ್ತಡ & ಆತಂಕ ನಿವಾರಣೆ: ಅಶ್ವಗಂಧವನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸುವುದರಿಂದ ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ ಎಂದು National Institute of Health ಹೇಳುತ್ತವೆ. ಏಕೆಂದರೆ, ಇದು ದೇಹದಲ್ಲಿನ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.

ಮಧುಮೇಹ ನಿಯಂತ್ರಣಕ್ಕೆ ಸಹಕಾರಿ: ಮಧುಮೇಹದಿಂದ ಬಳಲುತ್ತಿರುವವರಿಗೆ ಅಶ್ವಗಂಧವು ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ. National Library of Medicine ಸಂಶೋಧನಾ ವರದಿಯಲ್ಲಿ, ಮಧುಮೇಹ ರೋಗಿಗಳಲ್ಲಿ ಇನ್ಸುಲಿನ್ ಸಂವೇದನೆ ಮತ್ತು ಒಟ್ಟಾರೆ ಚಯಾಪಚಯ ಪ್ರೊಫೈಲ್ಗಳನ್ನು ಹೆಚ್ಚಿಸುತ್ತದೆ ಎಂದು ವಿವರಿಸಲಾಗುತ್ತದೆ.
ಸ್ನಾಯುಗಳ ಬೆಳವಣಿಗೆಗೆ ಉತ್ತಮ: ಅಶ್ವಗಂಧವು ಸ್ನಾಯುಗಳ ಬಲವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಅಡಾಪ್ಟೋಜೆನಿಕ್ ಗುಣಲಕ್ಷಣಗಳು ದೇಹವು ದೈಹಿಕ ಒತ್ತಡಕ್ಕೆ ಪ್ರತಿಕ್ರಿಯಿಸಲು ಹೆಚ್ಚು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಶ್ವಗಂಧವು ಸ್ನಾಯುವಿನ ದ್ರವ್ಯರಾಶಿ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಇದು ಉತ್ತಮ ವ್ಯಾಯಾಮ ಕಾರ್ಯಕ್ಷಮತೆಗೆ ಕಾರಣವಾಗುತ್ತದೆ ಎಂದು National Library of Medicine ವರದಿ ತಿಳಿಸುತ್ತದೆ.

ಹೃದಯದ ಆರೋಗ್ಯ: ಅಶ್ವಗಂಧವನ್ನು ಆಹಾರದಲ್ಲಿ ನಿಯಮಿತವಾಗಿ ಸೇರಿಸಿಕೊಳ್ಳುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೀರ್ಘಕಾಲದವರೆಗೆ ಅಶ್ವಗಂಧ ಸೇವಿಸಿದವರಲ್ಲಿ ಕೊಲೆಸ್ಟ್ರಾಲ್ ಮಟ್ಟವು ಗಮನಾರ್ಹವಾಗಿ ಕಡಿಮೆಯಾಗಿದೆ. ಇದರಿಂದಾಗಿ ಹೃದಯದ ಕಾರ್ಯವು ಸುಧಾರಿಸುತ್ತದೆ. ಅಶ್ವಗಂಧವು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಅನೇಕ ಅಧ್ಯಯನಗಳು ತಿಳಿಸಿವೆ.
ಖಿನ್ನತೆ ದೂರ: ಅಶ್ವಗಂಧವನ್ನು ನಿಯಮಿತವಾಗಿ ಸೇವಿಸುವುದರಿಂದ ನೈಸರ್ಗಿಕವಾಗಿ ಮನಸ್ಥಿತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತದ. ಇದು ದೇಹದಲ್ಲಿ ಸಿರೊಟೋನಿನ್ ಮತ್ತು ಡೋಪಮೈನ್ನಂತಹ ಉತ್ತಮ ಭಾವನೆಯನ್ನು ನೀಡುವ ನರಪ್ರೇಕ್ಷಕಗಳ ಮಟ್ಟವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಖಿನ್ನತೆ ತೊಡೆದುಹಾಕಲು ಸಹಾಯ ಮಾಡುತ್ತದೆ.
ಆಯಾಸಕ್ಕೆ ಪರಿಹಾರ: ಸಾಕಷ್ಟು ವಿಶ್ರಾಂತಿ ಪಡೆದ ನಂತರವೂ ದಣಿವು ಹಾಗೂ ಆಲಸ್ಯದಂತಹ ಸಮಸ್ಯೆಗಳಿಗೆ ಅಶ್ವಗಂಧ ಅದ್ಭುತ ಔಷಧವಾಗಿದೆ. ಕಾಫಿ ಕುಡಿಯುವುದರಿಂದ ದೇಹವು ಆಯಾಸದಿಂದ ಮುಕ್ತವಾಗುತ್ತದೆಯೇ ಹಾಗೆಯೇ, ಅಶ್ವಗಂಧದೊಂದಿಗೆ ಅದೇ ಭಾವನೆಯನ್ನು ಸಹ ಪಡೆಯಲು ಸಾಧ್ಯವಾಗುತ್ತದೆ. ಆಯಾಸದಿಂದ ಬಳಲುತ್ತಿರುವವರು ದೀರ್ಘಾವಧಿಯಲ್ಲಿ ಅಶ್ವಗಂಧವನ್ನು ಬಳಸುವುದರಿಂದ ಪ್ರಯೋಜನ ಪಡೆಯಬಹುದು ಎಂದು ತಜ್ಞರು ತಿಳಿಸುತ್ತಾರೆ.

ಸ್ಮರಣ ಶಕ್ತಿ ವೃದ್ಧಿ: ಅಶ್ವಗಂಧವು ಖಿನ್ನತೆ, ಒತ್ತಡ ಹಾಗೂ ಆತಂಕವನ್ನು ಕಡಿಮೆ ಮಾಡುವುದಲ್ಲದೆ ಸ್ಮರಣೆಯನ್ನು ಸುಧಾರಿಸುತ್ತದೆ ಎಂದು Clevelandclinic ತಿಳಿಸುತ್ತದೆ. ಒಂದಕ್ಕಿಂತ ಹೆಚ್ಚು ಕೆಲಸಗಳನ್ನು ಮಾಡುವ ಮತ್ತು ಸ್ಮರಣಶಕ್ತಿಯನ್ನು ಸುಧಾರಿಸುವವರಿಗೆ ಇದು ತುಂಬಾ ಉಪಯುಕ್ತವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ವಯಸ್ಸಾದ ಲಕ್ಷಣಗಳನ್ನು ಕಡಿಮೆ ಮಾಡಲು ಅಶ್ವಗಂಧ ಒಳ್ಳೆಯದು ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.
ಯಾರು ಅಶ್ವಗಂಧ ಸೇವಿಸಬಾರದು?: ಅಶ್ವಗಂಧವು ಆರೋಗ್ಯಕ್ಕೆ ಒಳ್ಳೆಯದಾದರೂ, ಇದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು ಬಯಸುವವರು ವೈದ್ಯರನ್ನು ಸಂಪರ್ಕಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರು ವಿಶೇಷವಾಗಿ ಇದನ್ನು ಸೇವಿಸಬಾರದು ಎಂದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ತಿಳಿಸುತ್ತದೆ.
ಇದನ್ನೂ ಓದಿ: ಒತ್ತಡ, ಖಿನ್ನತೆ ನಿವಾರಿಸಲು 10 ನಿಮಿಷಗಳವರೆಗೆ Yoga ಮಾಡಿದರೆ ಅತ್ಯುತ್ತಮ ಫಲಿತಾಂಶ!