ETV Bharat / state

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪತ್ನಿಗೆ ಸಮನ್ಸ್ ಜಾರಿ - ATUL SUBHASH DEATH CASE

ಉತ್ತರ ಪ್ರದೇಶಕ್ಕೆ ತೆರಳಿದ ಬೆಂಗಳೂರಿನ ಮಾರತ್‌ಹಳ್ಳಿ ಪೊಲೀಸರು ಮನೆಗೆ ಬೀಗ ಹಾಕಿರುವುದನ್ನು ಗಮನಿಸಿ, ಮನೆ ಮುಂದಿನ ಗೋಡೆಗೆ ಸಮನ್ಸ್​ ಪ್ರತಿ ಅಂಟಿಸಿ ಬಂದಿದ್ದಾರೆ.

Police post summons
ಅತುಲ್ ಸುಭಾಷ್ ಪತ್ನಿಯ ಮನೆ ಗೋಡೆಗೆ ಸಮನ್ಸ್​ ಅಂಟಿಸುತ್ತಿರುವ ಪೊಲೀಸರು (ETV Bharat)
author img

By ETV Bharat Karnataka Team

Published : Dec 13, 2024, 7:55 PM IST

ಬೆಂಗಳೂರು: ರಾಷ್ಟ್ರದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಅತುಲ್ ಸುಭಾಷ್ ಆತ್ಮಹತ್ಯೆ ಕುರಿತು, ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿರುವ ನಗರದ ಮಾರತ್‌ಹಳ್ಳಿ ಠಾಣೆ ಪೊಲೀಸರು ಇಂದು ಉತ್ತರ ಪ್ರದೇಶದ ಜೋನಪುರದಲ್ಲಿರುವ ಪತ್ನಿ ನಿಖಿತಾ ಸಿಂಘಾನಿಯಾ ಅವರ ಮನೆ ಮುಂದೆ ಸಮನ್ಸ್ ಅಂಟಿಸಿದ್ದಾರೆ. ಮೂರು ದಿನದೊಳಗಾಗಿ ವಿಚಾರಣೆ ಹಾಜರಾಗಬೇಕೆಂದು ಸಮನ್ಸ್​ನಲ್ಲಿ ಸೂಚಿಸಲಾಗಿದೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಅತುಲ್ ಪತ್ನಿ ನಿಖಿತಾ ಮನೆಗೆ ತೆರಳಿದ ಪೊಲೀಸರು ಬೀಗ ಹಾಕಿರುವುದನ್ನು ಕಂಡು ಮನೆ ಗೋಡೆ ಮೇಲೆ ಸಮನ್ಸ್ ಅಂಟಿಸಿದರು. ಆತ್ಮಹತ್ಯೆ ಪ್ರಕರಣ ಸಂಬಂಧ ಸಾಂದರ್ಭಿಕ ಸಾಕ್ಷ್ಯ ದೊರೆತ ಹಿನ್ನೆಲೆಯಲ್ಲಿ ಪತ್ನಿಗೆ ಮಾತ್ರ ನೋಟಿಸ್ ಜಾರಿ ಮಾಡಲಾಗಿದೆ. ನಿನ್ನೆ ತಡರಾತ್ರಿ ಜೋನಪುರ ತಲುಪಿದ ಪೊಲೀಸರು ಸ್ಥಳೀಯ ಎಸ್ಪಿ ಅಜಯ್ ಶರ್ಮಾ ಪಾಲ್ ಜೊತೆ ಮಾತುಕತೆ ನಡೆಸಿ ಇಂದು ಸಮನ್ಸ್ ಜಾರಿ ಮಾಡಿದ್ದಾರೆ.

34 ವರ್ಷದ ಅತುಲ್ ಮಾರತ್‌ಹಳ್ಳಿಯ ಬಹುರಾಷ್ಟ್ರೀಯ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ಆಕೆ ಮನೆಯವರು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಡಿಸೆಂಬರ್ 9ರಂದು ಡೆತ್​ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಇನ್ನಿತರರಿಗೆ ಈಗಿನ ನ್ಯಾಯದಾನ ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಟೆಕ್ಕಿ ಅತುಲ್ ಸುಭಾಷ್ ಸಾವು ಪ್ರಕರಣ: ಅತ್ತೆ, ಸೋದರ ಮಾವ ಮನೆಯಿಂದ ಪಲಾಯನ

ಬೆಂಗಳೂರು: ರಾಷ್ಟ್ರದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಅತುಲ್ ಸುಭಾಷ್ ಆತ್ಮಹತ್ಯೆ ಕುರಿತು, ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿರುವ ನಗರದ ಮಾರತ್‌ಹಳ್ಳಿ ಠಾಣೆ ಪೊಲೀಸರು ಇಂದು ಉತ್ತರ ಪ್ರದೇಶದ ಜೋನಪುರದಲ್ಲಿರುವ ಪತ್ನಿ ನಿಖಿತಾ ಸಿಂಘಾನಿಯಾ ಅವರ ಮನೆ ಮುಂದೆ ಸಮನ್ಸ್ ಅಂಟಿಸಿದ್ದಾರೆ. ಮೂರು ದಿನದೊಳಗಾಗಿ ವಿಚಾರಣೆ ಹಾಜರಾಗಬೇಕೆಂದು ಸಮನ್ಸ್​ನಲ್ಲಿ ಸೂಚಿಸಲಾಗಿದೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಅತುಲ್ ಪತ್ನಿ ನಿಖಿತಾ ಮನೆಗೆ ತೆರಳಿದ ಪೊಲೀಸರು ಬೀಗ ಹಾಕಿರುವುದನ್ನು ಕಂಡು ಮನೆ ಗೋಡೆ ಮೇಲೆ ಸಮನ್ಸ್ ಅಂಟಿಸಿದರು. ಆತ್ಮಹತ್ಯೆ ಪ್ರಕರಣ ಸಂಬಂಧ ಸಾಂದರ್ಭಿಕ ಸಾಕ್ಷ್ಯ ದೊರೆತ ಹಿನ್ನೆಲೆಯಲ್ಲಿ ಪತ್ನಿಗೆ ಮಾತ್ರ ನೋಟಿಸ್ ಜಾರಿ ಮಾಡಲಾಗಿದೆ. ನಿನ್ನೆ ತಡರಾತ್ರಿ ಜೋನಪುರ ತಲುಪಿದ ಪೊಲೀಸರು ಸ್ಥಳೀಯ ಎಸ್ಪಿ ಅಜಯ್ ಶರ್ಮಾ ಪಾಲ್ ಜೊತೆ ಮಾತುಕತೆ ನಡೆಸಿ ಇಂದು ಸಮನ್ಸ್ ಜಾರಿ ಮಾಡಿದ್ದಾರೆ.

34 ವರ್ಷದ ಅತುಲ್ ಮಾರತ್‌ಹಳ್ಳಿಯ ಬಹುರಾಷ್ಟ್ರೀಯ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ಆಕೆ ಮನೆಯವರು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಡಿಸೆಂಬರ್ 9ರಂದು ಡೆತ್​ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಇನ್ನಿತರರಿಗೆ ಈಗಿನ ನ್ಯಾಯದಾನ ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಟೆಕ್ಕಿ ಅತುಲ್ ಸುಭಾಷ್ ಸಾವು ಪ್ರಕರಣ: ಅತ್ತೆ, ಸೋದರ ಮಾವ ಮನೆಯಿಂದ ಪಲಾಯನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.