ETV Bharat / state

ಆನೆ ದಾಳಿಯಿಂದ ಮೃತಪಟ್ಟ ಕೇರಳ ವ್ಯಕ್ತಿಗೆ ರಾಜ್ಯದಿಂದ ಪರಿಹಾರ: ಬಿ.ವೈ ವಿಜಯೇಂದ್ರ ಕಿಡಿ

author img

By ETV Bharat Karnataka Team

Published : Feb 20, 2024, 3:42 PM IST

Updated : Feb 20, 2024, 4:58 PM IST

Eಆನೆದಾಳಿಯಿಂದ ಮೃತಪಟ್ಟ ಕೇರಳ ವ್ಯಕ್ತಿಗೆ ರಾಜ್ಯದಿಂದ ಪರಿಹಾರ: ಬಿ.ವೈ ವಿಜಯೇಂದ್ರ ಆರೋಪ
ಆನೆದಾಳಿಯಿಂದ ಮೃತಪಟ್ಟ ಕೇರಳ ವ್ಯಕ್ತಿಗೆ ರಾಜ್ಯದಿಂದ ಪರಿಹಾರ: ಬಿ.ವೈ ವಿಜಯೇಂದ್ರ ಆರೋಪ

ವಯನಾಡಿನಲ್ಲಿ ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ ಎಂದು ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಆನೆ ದಾಳಿಯಿಂದ ಮೃತಪಟ್ಟ ಕೇರಳ ವ್ಯಕ್ತಿಗೆ ರಾಜ್ಯದಿಂದ ಪರಿಹಾರ ; ವಿಜಯೇಂದ್ರ ಕಿಡಿ

ಬೆಂಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ಆಧರಿಸಿ 15 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ಕರ್ನಾಟಕದ ಆನೆಯ ದಾಳಿಯಿಂದ ಕೇರಳದ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ಹೇಳಿದ್ದಾರೆ.

''ರಾಹುಲ್ ಗಾಂಧಿಯವರ ವಯನಾಡ್ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು'' ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಇದೇ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ವಯನಾಡಿನಲ್ಲಿ ಆನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ 15 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಅದು ಯಾರ ಆದೇಶ ಮೇರೆಗೆ?. ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಕೇರಳ ರಾಜ್ಯದ ಸಂಸದ ಆಗಿರುವ ರಾಹುಲ್ ಗಾಂಧಿ ಆದೇಶ ಮೇರೆಗೆ ಪರಿಹಾರ ನೀಡಿದ್ದಾರೆ ಎಂದು ಆರೋಪಿಸಿದರು. ಒಂದು ಕಡೆ ರೈತರಿಗೆ ಬರಗಾಲ ಸಂದರ್ಭದಲ್ಲಿ ಹೆಕ್ಟೇರ್​ಗೆ 2 ಸಾವಿರ ಭಿಕ್ಷೆ ರೀತಿಯಲ್ಲಿ ಕೊಡ್ತಾ ಇದೆ. ಯಾರನ್ನ ಕೇಳಿ ಈ ನಿರ್ಧಾರ ತೆಗೆದಕೊಂಡಿದ್ದೀರಿ. ಹೇಳೋರು ಕೇಳೋರು ಯಾರು ಇಲ್ವಾ? ಎಂದು ಕಿಡಿಕಾರಿದರು.

ಹೈಕಮಾಂಡ್ ನಾಯಕರ ಮೆಚ್ಚುಗೆ ಪಡಿಸಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಮನಗರದಲ್ಲಿ ವಕೀಲರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ರಾಜ್ಯ ಸರ್ಕಾರ ಎಲ್ಲಾ ಘಟನೆ ಬಹಳ ಹಗುರವಾಗಿ ತೆಗೆದುಕೊಳ್ತಾಯಿದೆ ಎಂದು ದೂರಿದರು.

ಇದನ್ನೂ ಓದಿ: ಧಮ್ಕಿ ಸಂಸ್ಕೃತಿಯಿಂದ ಬಂದವರು ಯಾರು?, ಸೆಟ್ಲ್​ಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ: ಹೆಚ್​ಡಿಕೆ

Last Updated :Feb 20, 2024, 4:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.