ETV Bharat / state

ಸಿದ್ದರಾಮಯ್ಯ ಸರ್ಕಾರ ತಮ್ಮ ಖಜಾನೆಯಿಂದ ದುಡ್ಡು ಬಿಡುಗಡೆ ಮಾಡಿ ತೋರಿಸಲಿ: ಬೊಮ್ಮಾಯಿ - Basavaraj Bommai

author img

By ETV Bharat Karnataka Team

Published : Apr 4, 2024, 10:38 PM IST

Former CM Basavaraj Bommai
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

17 ಲಕ್ಷ ಜನರಿಗೆ ಪರಿಹಾರ ಕೊಟ್ಟಿರೋದು ನಮ್ಮ ಗಂಡಸ್ತನ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಹಾವೇರಿ: ಮೋದಿ ಮುಂದೆ ಬರಗಾಲದ ಬಗ್ಗೆ ಮಾತನಾಡಲು ಒಬ್ಬೇ ಒಬ್ಬ ಬಿಜೆಪಿ ನಾಯಕರು ಗಂಡಸರಾಗಿ ನಿಂತಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನೋಡ್ರಿ ಈಗ ಸದ್ಯ ಗಂಡಸ್ತನ ಟೆಸ್ಟ್ ಆಗೋದು ಯಾರು ಅಧಿಕಾರದಲ್ಲಿದ್ದಾರೋ ಅವರದ್ದು. ಸಿದ್ದರಾಮಯ್ಯರನ್ನು ಜನ ಅಧಿಕಾರಕ್ಕೆ ತಂದಿದ್ದಾರೆ. ಅಧಿಕಾರಕ್ಕೆ ತಂದ ಮಾಲೀಕರು ಕಷ್ಟದಲ್ಲಿದ್ದಾರೆ. ಅವರ ಕಷ್ಟಕ್ಕೆ ಧಾವಿಸೋದು ಅವರ ಕೆಲಸ ಎಂದರು.

ನಮ್ಮ ಗಂಡಸ್ತನ ನಾವು ಈಗಾಗಲೇ ತೋರಿಸಿದ್ದೇವೆ. ಪ್ರವಾಹ ಬಂದಾಗ ಯಾರಿಗೂ ಕಾಯದೇ ಪ್ರವಾಹ ಪರಿಹಾರ ಎರಡು ಪಟ್ಟು ಬಿಡುಗಡೆ ಮಾಡಿದ್ದೇವೆ. 17 ಲಕ್ಷ ಜನರಿಗೆ ಪರಿಹಾರ ಕೊಟ್ಟಿರೋದು ನಮ್ಮ ಗಂಡಸ್ತನ. ನಾವೇನೂ ಯಾರ ಮೇಲೂ ಬೊಟ್ಟು ಮಾಡಿ ತೋರಿಸಿಲ್ಲ. ನಿಜವಾದ ಗಂಡಸ್ತನದ ಪರೀಕ್ಷೆ ಈಗ ಇವರದ್ದಿದೆ. ಇವರು ಕೇಂದ್ರದ ಮೇಲೆ ಬೊಟ್ಟು ಮಾಡಿ ತೋರಿಸದೆ ತಮ್ಮ ಖಜಾನೆಯಿಂದ ದುಡ್ಡು ಬಿಡುಗಡೆ ಮಾಡಿ ತೋರಿಸಲಿ ಎಂದು ಒತ್ತಾಯಿಸಿದರು.

ನಮಗೇನು ಆಗ ಮೇಲಿಂದ ಪರಿಹಾರ ಬಂದಿತ್ತಾ? ಆ ಮೇಲೆ ಬಂತು. ಈಗ ರೈತರಿಗೆ ಪರಿಹಾರ ಕೊಡಲು ಖಜಾನೆ ಖಾಲಿಯಾಗಿದೆ. ತಮ್ಮ ವೈಫಲ್ಯ ಮುಚ್ಚಿ ಹಾಕಲು ಕುಂಟು ನೆಪ ಹೇಳ್ತಾರೆ. ವೈಫಲ್ಯ ಮುಚ್ಚಿಕೊಳ್ಳಲು ಗಂಡಸ್ತನದ ಮಾತು ಹೇಳ್ತಿದ್ದಾರೆ ಎಂದು ಆರೋಪಿಸಿದರು.

ರಾಮಮಂದಿರ ತೋರಿಸಿ ಬಿಜೆಪಿ ಮತಯಾಚನೆ ಮಾಡ್ತಿದ್ದಾರೆಂಬ ಕಾಂಗ್ರೆಸ್ಸಿಗರ ಹೇಳಿಕೆ ವಿಚಾರ ಕುರಿತಂತೆ ಮಾತನಾಡಿದ ಬೊಮ್ಮಾಯಿ, ನಾವು ರಾಮನ ಹೆಸರೂ ಹೇಳ್ತೀವಿ, ರಾಮ ರಾಜ್ಯವನ್ನೂ ಮಾಡಿದ್ದೇವೆ ಎಂದರು.

ಶಿವಮೊಗ್ಗದಲ್ಲಿ ಬಿಎಸ್​ವೈ ಹೊಂದಾಣಿಕೆ ರಾಜಕೀಯ ಮಾಡ್ತಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿ, ಎಲೆಕ್ಷನ್ ಸಂದರ್ಭದಲ್ಲಿ ಈ ತರದ ಹೇಳಿಕೆಗಳು ಸಹಜ. ಅಂತಿಮ ತೀರ್ಪು ಜನ ಕೊಡ್ತಾರೆ. ಆದ್ದರಿಂದ ಯಾರೂ ಯಾರ ಜತೆಗೂ ಹೊಂದಾಣಿಕೆ ಮಾಡಿಕೊಳ್ಳೋದು ಸಾಧ್ಯವಿಲ್ಲ. ಈಶ್ವರಪ್ಪನವರು ಅವರ ಅನುಕೂಲಕ್ಕೆ ತಕ್ಕಂತೆ ವಾದ ಮಾಡ್ತಾರೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: 'ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?' - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.